ವಿದ್ಯಾರ್ಥಿನಿ ಆತ್ಮಹತ್ಯೆ ಕಡೆ ಆಸೆ ಕೇಳಿ ಬೆಚ್ಚಿಬಿದ್ದ ಗ್ರಾಮಸ್ಥರು

Webdunia
ಭಾನುವಾರ, 2 ಅಕ್ಟೋಬರ್ 2022 (14:03 IST)
ಯುವತಿಯೊಬ್ಬಳು ಗಣೇಶ ವಿಸರ್ಜನೆಗಾಗಿ ನಿರ್ಮಿಸಿದ್ದ ಕೆರೆಯೊಂದಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೂ ಮೊದಲು 4 ಪುಟಗಳ ಸುದೀರ್ಘ ಡೆತ್​ನೋಟ್​ ಕೂಡ ಬರೆದಿಟ್ಟಿದ್ದಳು. ಇದೀಗ ಆ ಡೆತ್​​ನೋಟ್ ಮಾಹಿತಿ ಬಹಿರಂಗಗೊಂಡಿದ್ದು, ಯುವತಿ ಅದರಲ್ಲಿ ತನ್ನ ಕೊನೆಯ ಆಸೆಯನ್ನೂ ಹೇಳಿಕೊಂಡಿದ್ದಾಳೆ.
ಸಿಂಧನೂರಿನಲ್ಲಿ ಈ ಘಟನೆ ನಡೆದಿದೆ. ಹತ್ತನೇ ತರಗತಿ ವಿದ್ಯಾರ್ಥಿನಿ ಸಾರಿಕಾ (16) ಆತ್ಮಹತ್ಯೆ ಮಾಡಿಕೊಂಡವಳು. ನಾಲ್ಕು ಪುಟಗಳ ಡೆತ್​ನೋಟ್ ಸಿಕ್ಕಿದ್ದರೂ ಆತ್ಮಹತ್ಯೆಗೆ ಕಾರಣ ಏನು ಎಂಬ ಬಗ್ಗೆ ನಿಖರವಾದ ಮಾಹಿತಿ ಅದರಲ್ಲಿ ಉಲ್ಲೇಖವಾಗಿಲ್ಲ. ಆದರೆ ಆಕೆ ಅದರಲ್ಲಿ ವ್ಯಕ್ತಪಡಿಸಿರುವ ಕೊನೆಯ ಆಸೆಯಂತೂ ವಿಚಿತ್ರವಾಗಿದೆ.
 
ತನ್ನ ಗೆಳೆಯ-ಗೆಳತಿಯರೊಂದಿಗೆ ಕಳೆದ ಸಂತೋಷದ ಕ್ಷಣಗಳನ್ನು ಈ ಯುವತಿ ಹೇಳಿಕೊಂಡಿದ್ದಾಳೆ. ಅಲ್ಲದೆ ತನ್ನದೊಂದು ಕೊನೆಯ ಆಸೆಯನ್ನೂ ತಿಳಿಸಿದ್ದಾಳೆ. 'ನನ್ನದು ಒಂದೇ ಆಸೆ, ನನ್ನ ಶವ ನೋಡೋಕೆ ಎಲ್ಲರೂ ಬನ್ನಿ, ಇಲ್ಲಂದ್ರೆ ನಾನು ದೆವ್ವ ಆಗಿ ಬರ್ತೀನಿ ನೋಡಿ' ಎಂಬುದಾಗಿ ತನ್ನ ಡೆತ್​ನೋಟ್​ನ ಕೊನೆಯಲ್ಲಿ ಬರೆದುಕೊಂಡಿದ್ದಳು. ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಫುಟ್ಪಾತ್ ತೆರವುಗೊಳಿಸುತ್ತಿದ್ದ ಜಿಬಿಎ ಅಧಿಕಾರಿಗಳಿಂದ ಶಿವಾಜಿನಗರದಲ್ಲಿ ಕೈಗೆ ಸಿಕ್ಕ ವಸ್ತುಗಳಿಂದ ದಾಳಿ Video

ಜು 26ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಮುಂದಿನ ಸುದ್ದಿ
Show comments