Publish Date: Mon, 10 Jul 2023 (18:30 IST)
Updated Date: Mon, 10 Jul 2023 (18:01 IST)
ಶಾಲಾ ಶಿಕ್ಷಕಿಯರ ನಡುವಿನ ಕಿತ್ತಾಟದಿಂದ ಬೇಸತ್ತು ವಿದ್ಯಾರ್ಥಿಗಳು ಶಾಲೆಯನ್ನು ಬಿಟ್ಟು ಬೇರೆ ಶಾಲೆಗಳಿಗೆ ತೆರಳಿರುವ ಘಟನೆ ಬೆಳಕಿಗೆ ಬಂದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಸೋಣಂದೂರು ಸರ್ಕಾರಿ ಪ್ರಾರ್ಥಮಿಕ ಶಾಲೆಯಲ್ಲಿ ಬೆಳಕಿಗೆ ಬಂದಿದೆ.. ಶಾಲೆಯಲ್ಲಿ 1 ರಿಂದ 7 ನೇ ತರಗತಿವರೆಗೆ 37 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದರು. ಶಾಲೆಯೂ ಸಹ ಚೆನ್ನಾಗಿ ನಡೆಯುತ್ತಿತ್ತು.. ಆದರೆ ಶಾಲೆಗೆ ಶಿಕ್ಷಕಿಯರೇ ಶಾಪವಾಗಿ ಪರಿಣಮಿಸಿದ್ದರು.. ಮುಖ್ಯ ಶಿಕ್ಷಕಿ ಲೀನಾ ಡಿಸೋಜ ಮತ್ತು ಜೆಸಿಂತಾ ಡಿಸೋಜ ನಡುವೆ ದಿನನಿತ್ಯ ಜಗಳ ನಡೆಯುತ್ತಿತ್ತು.. ಇದರಿಂದ ಬೇಸತ್ತಿದ್ದ ವಿದ್ಯಾರ್ಥಿಗಳು ಶಾಲೆಯನ್ನು ಬಿಟ್ಟು ಅಕ್ಕಪಕ್ಕದ ಶಾಲೆಗಳಿಗೆ ದಾಖಲಾಗಿದ್ದಾರೆ.. ಇದಕ್ಕೂ ಮುನ್ನ ವಿದ್ಯಾರ್ಥಿಗಳ ಪೋಷಕರು ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದರು, ಆದರೂ ಸಹ ಶಿಕ್ಷಣಾಧಿಕಾರಿ ಯಾವುದೇ ಕ್ರಮ ಕೈಗೊಂಡಿಲ್ಲ.