Publish Date: Mon, 13 Feb 2023 (08:47 IST)
Updated Date: Mon, 13 Feb 2023 (01:17 IST)
ರಾಯಚೂರು : ರಾಜ್ಯದಲ್ಲಿ ಶಿಕ್ಷಣ ಇಲಾಖೆ ಆರ್ಥಿಕ ಸಂಕಷ್ಟವನ್ನ ಎದುರಿಸುತ್ತಿದೆಯಾ ಅನ್ನೋ ಅನುಮಾನಗಳು ಮತ್ತೆ ಮೂಡಿವೆ.
ಈ ಹಿಂದೆ ಶಿಕ್ಷಣ ಸಚಿವರು ಸರ್ಕಾರಿ ಶಾಲೆ ಮಕ್ಕಳ ಪೋಷಕರಿಂದ 100 ರೂ. ಪಡೆದು ರಶೀದಿ ಕೊಡಬೇಕು ಅನ್ನೋ ಹೇಳಿಕೆ ಭಾರೀ ವಿವಾದ ಸೃಷ್ಟಿಸಿತ್ತು. ಈಗ ಪೂರ್ವ ಸಿದ್ಧತಾ ಪರೀಕ್ಷೆಗೆ ಶುಲ್ಕ ನಿಗದಿ ಮಾಡಿ, ಹಣ ಸಂಗ್ರಹಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ 2022-23 ನೇ ಸಾಲಿನ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯನ್ನ ಫೆಬ್ರವರಿ 23 ರಿಂದ ಮಾರ್ಚ್ 1 ರ ವರೆಗೆ ನಡೆಸಲು ಈಗಾಗಲೇ ವೇಳಾಪಟ್ಟಿಯನ್ನ ಪ್ರಕಟಿಸಿದೆ.