Webdunia - Bharat's app for daily news and videos

Install App

ಪೋಷಕರ ಸಮ್ಮತಿ ಪಡೆದೇ ವಿದ್ಯಾರ್ಥಿಗಳು ಶಾಲೆಗೆ ಬರಬೇಕು : ಬೊಮ್ಮಾಯಿ

Webdunia
ಶನಿವಾರ, 21 ಆಗಸ್ಟ್ 2021 (11:45 IST)
ಬೆಂಗಳೂರು : ಕೊರೊನಾ ಆತಂಕದ ನಡುವೆಯೂ ಕರ್ನಾಟಕದಲ್ಲಿ ಆಗಸ್ಟ್ 23ರಿಂದ ಮೊದಲ ಹಂತದಲ್ಲಿ ಶಾಲೆಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.

ಈ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಶಾಲೆ ಆರಂಭದ ಬಗ್ಗೆ ಸರ್ಕಾರಿ, ಖಾಸಗಿ ಶಾಲೆಗಳಿಗೆ ಮಾರ್ಗಸೂಚಿ ನೀಡಲಾಗಿದೆ. ಶಾಲೆ ಆರಂಭದ ದಿನ ಬೆಂಗಳೂರಿನ ಕೆಲ ಶಾಲೆಗಳಿಗೆ ನಾನು ಮತ್ತು ಶಿಕ್ಷಣ ಸಚಿವರು ಭೇಟಿ ನೀಡುತ್ತೇವೆ. ಶಿಕ್ಷಕರಿಗೆ ಕೊವಿಡ್ ಲಸಿಕೆಯನ್ನು ನೀಡಲಾಗಿದೆ. ಪೋಷಕರ ಸಮ್ಮತಿ ಪಡೆದು ಮಕ್ಕಳು ಯಾವುದೇ ಆತಂಕ ಇಲ್ಲದೆ ಶಾಲೆಗೆ ಬರಬಹುದು ಎಂದು ತಿಳಿಸಿದ್ದಾರೆ.
ಮಕ್ಕಳ ಆರೋಗ್ಯದ ದೃಷ್ಟಿಯಿಂದ ಪೋಷಕರೂ ಸಹ ಕೊವಿಡ್ ವ್ಯಾಕ್ಸಿನ್ ಹಾಕಿಸಿಕೊಳ್ಳಬೇಕು. ಉಳಿದಂತೆ ಶಾಲೆ ಆರಂಭಕ್ಕೆ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದರಲ್ಲಿ ಯಾವುದೇ ಗೊಂದಲ ಇಲ್ಲ. ಮಾರ್ಗಸೂಚಿ ಅನ್ವಯ ತರಗತಿಗಳು ನಡೆಯಲಿವೆ ಎಂದು ಮಾಹಿತಿ ನೀಡಿದ್ದಾರೆ.
ಆಗಸ್ಟ್ 23 ರಿಂದ 9 ರಿಂದ 12 ನೇ ತರಗತಿಗಳಿಗೆ ಶಾಲೆ ಆರಂಭ ಮಾಡಲು ಸಿದ್ಧತೆ ನಡೆದಿದೆ. ಹಂತ ಹಂತವಾಗಿ ಶಾಲೆ ಆರಂಭಕ್ಕೆ ಶಿಕ್ಷಣ ಇಲಾಖೆ ಮುಂದಾಗಿದ್ದು, ಶೇ.2 ಕ್ಕಿಂತ ಹೆಚ್ಚು ಪಾಸಿಟಿವಿಟಿ ಪ್ರಮಾಣ ಇರುವ ಜಿಲ್ಲೆಗಳಾದ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಉಡುಪಿ, ಹಾಸನ ಹೊರತುಪಡಿಸಿ ಮಿಕ್ಕೆಲ್ಲಾ ಕಡೆಗಳಲ್ಲೂ 9 ರಿಂದ 12 ನೇ ತರಗತಿಗಳಿಗೆ ಮೊದಲ ಹಂತದಲ್ಲಿ ಶಾಲೆ ಶುರುವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ಇದೊಂದು ಕೆಲಸ ಮಾಡಿದ್ರೆ ಚಿನ್ನಸ್ವಾಮಿಯಲ್ಲಿ ದುರಂತವಾಗ್ತಾನೇ ಇರಲಿಲ್ಲ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

ಮುಂದಿನ ಸುದ್ದಿ
Show comments