Publish Date: Mon, 14 Feb 2022 (20:15 IST)
Updated Date: Mon, 14 Feb 2022 (20:20 IST)
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ 9 ಮತ್ತು 10ನೇ ತರಗತಿ ಆರಂಭವಾಗುತ್ತಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಿಳಿಸಿದ್ದಾರೆ.
ಹೌದು, ಹಿಜಾಬ್ ಮತ್ತು ಕೇಸರಿ ಶಾಲಿನ ವಿವಾದ ಜೋರಾಗುತ್ತಲೇ ಸರ್ಕಾರ ಶಾಲಾ, ಕಾಲೇಜಿಗೆ ರಜೆ ಘೋಷಣೆ ಮಾಡಿತ್ತು. ಇದೀಗ ಇಂದಿನಿಂದ 9 ಮತ್ತು 10ನೇ ತರಗತಿ ಆರಂಭವಾಗುತ್ತಿದ್ದು ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.
ಸದ್ಯ 9ನೇ ತರಗತಿ ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಅನುಮತಿ ನೀಡಿದ್ದು, ಪಿಯುಸಿ, ಡಿಪ್ಲೋಮ ಹಾಗು ಪದವಿ ತರಗತಿಗಳಿಗೆ ರಜೆಯನ್ನು ಮುಂದುವರೆಸಲಾಗಿದ್ದು, ಇಂದು ನಡೆಯಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದ ಸಭೆ ನಂತರ ಪಿಯುಸಿ ಹಾಗೂ ಪದವಿ ತರಗತಿಗಳ ಆರಂಭದ ಕುರಿತು ನಿರ್ಧಾರವಾಗಲಿದೆ.