Webdunia - Bharat's app for daily news and videos

Install App

ಪೋಷಕರಿಂದ ಡೆತ್ ನೋಟ್ ಬರೆಸಿಕೊಳ್ಳುತ್ತಿರುವ ವಾರ್ಡನ್ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ

Webdunia
ಬುಧವಾರ, 17 ಅಕ್ಟೋಬರ್ 2018 (13:25 IST)
ಹಾಸ್ಟೇಲ್ ನಲ್ಲಿ ಯಾವುದೇ ಮೂಲಭೂತ ‌ಸೌಕರ್ಯಗಳಿಲ್ಲ. ಏನನ್ನಾದರೂ ವಿದ್ಯಾರ್ಥಿಗಳು ಕೇಳಲು ಹೊದರೆ ಹೊರಗಿನ ಗುಂಡಾಗಳಿಂದ ಹಲ್ಲೆ ಮಾಡಿಸುತ್ತಾರೆ ಹಾಗೂ‌ ವಿದ್ಯಾರ್ಥಿಗಳ ಪೋಷಕರಿಂದ ಡೆತ್ ನೋಟ್ ಬರೆಸಿಕೊಂಡಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ವಿಜಯಪುರ ನಗರ ಮೆಟ್ರಿಕ್ ನಂತರದ ಹಾಸ್ಟೇಲ್ ವಿದ್ಯಾರ್ಥಿಗಳು ಏಕಾ ಏಕಿ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ‌ಹಾಸ್ಟೇಲ್ ವಾರ್ಡನ್ ಕೂಲಪ್ಪ ಕೋರೆ ಎಂಬಾತ ಹಾಸ್ಟೇಲ್ ವಿದ್ಯಾರ್ಥಿಗಳ ಮೇಲೆ ಗುಂಡಾಗಳನ್ನು ಕರೆಸಿ ಹಲ್ಲೆ ಮಾಡಿಸುತ್ತಾರೆ. ಹಾಸ್ಟೇಲ್ ಮೂಲಭೂತ ಸೌಕರ್ಯಗಳ ಕುರಿತು ಪ್ರಶ್ನಿಸಿದರೆ ಪೊಲಿಸರಿಂದ ಬೆದರಿಕೆ ಹಾಕಿಸುತ್ತಾರೆ. ಅಷ್ಟೇ ಅಲ್ಲದೇ ಹಾಸ್ಟೇಲ್ ನ ವಿದ್ಯಾರ್ಥಿಗಳ ಪೋಷಕರಿಂದ ಡೆತ್ ನೋಟ್ ಬರೆಸಿಕೊಂಡಿದ್ದಾರೆ.

ಹಾಸ್ಟೇಲ್ ನಲ್ಲಿ ವಿದ್ಯಾರ್ಥಿಗಳು ಮೃತ ಪಟ್ಟರೆ ಅದಕ್ಕೆ ವಾರ್ಡನ್ ಆಗಲಿ ಅಥವಾ ಸರ್ಕಾರಿ ಅಧಿಕಾರಿಗಳಾಗಲಿ ಜವಾಬ್ದಾರರಲ್ಲ ಎಂದು ವಿದ್ಯಾರ್ಥಿಗಳ ಪೋಷಕರಿಂದ ಬಾಂಡ್ ಮಾಡಿಸಿಕೊಳ್ಳುತ್ತಿದ್ದಾರೆ. ಇಂತಹ ಹಾಸ್ಟೇಲ್ ವಾರ್ಡನ್ ನನ್ನು ಇಂದೇ ಅಮಾನತ್ತುಗೊಳಿಸಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಇನ್ನು ಈ ಕುರಿತು ವಾರ್ಡನ್ ಕೂಲಪ್ಪ ಕೊರೆಯನ್ನು ಕೇಳಿದರೆ ನಾನು ಡೆತ್ ನೋಟ್ ಕುರಿತು ಬರೆದು ಕೊಡಲು ‌ಹೇಳಿಲ್ಲ‌‌. ಆದರೆ ವಿದ್ಯಾರ್ಥಿಗಳ ಪುಂಡಾಟಿಕೆ ಕುರಿತು ಗಮನಕ್ಕೆ ಬಂದರೆ ಅವರನ್ನು ಹಾಸ್ಟೇಲ್ ನಿಂದ ಕಿತ್ತು ಹಾಕುತ್ತೇನೆ. ಇದಕ್ಕೆ ಪೋಷಕರ ಒಪ್ಪಿಗೆ ಕೂಡಾ ಇದೆ ಎಂದು ಬರೆದು ಕೊಡಲು ತಿಳಿಸಿದ್ದೆ. ಇನ್ನು ಹಾಸ್ಟೇಲ್ ನಲ್ಲಿ 10 ವಿದ್ಯಾರ್ಥಿಗಳು ಅನಧಿಕೃತವಾಗಿ ಇದ್ದರು. ಅಂತವರನ್ನು ಕಿತ್ತು ಹಾಕಿದ್ದೇನೆ. ಈ ಹಿನ್ನಲೆಯಲ್ಲಿ ಕೆಲ ವಿದ್ಯಾರ್ಥಿಗಳು ಈ ರೀತಿಯ ಆರೋಪ ಮಾಡುತ್ತಿದ್ದಾರೆ. ಈ ವಿದ್ಯಾರ್ಥಿಗಳ  ಪ್ರತಿಭಟನೆ ಹಿಂದೆ ಕೆಲವು ಕಾಣದ ಕೈಗಳ ಕೈವಾಡವಿದೆ ನನಗೆ ಹಲವು ಬೇಡಿಕೆಗಳನ್ನು ಅವರು ಇಟ್ಟಿದ್ದರು. ಅದಕ್ಕೆ ನಾನು ಬಗ್ಗದಾದಾಗ ಈ ರೀತಿಯ ಆರೋಪ ಹೊರಿಸುತ್ತಿದ್ದಾರೆ ಎಂದು ವಾರ್ಡನ್ ಹೇಳಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments