Select Your Language

Notifications

webdunia
webdunia
webdunia
webdunia

ಬಸ್​ಗಳಿಲ್ಲದೆ ವಿದ್ಯಾರ್ಥಿಗಳ ಪರದಾಟ

ಬಸ್​ಗಳಿಲ್ಲದೆ ವಿದ್ಯಾರ್ಥಿಗಳ ಪರದಾಟ
ಕೊಪ್ಪಳ , ಮಂಗಳವಾರ, 4 ಜುಲೈ 2023 (19:43 IST)
ಬಸ್​​ಗಳಿಲ್ಲದೇ ವಿದ್ಯಾರ್ಥಿಗಳು ಪರದಾಡುವಂತಹ ಸ್ಥಿತಿ ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ನಿರ್ಮಾಣವಾಗಿದೆ. ಶಕ್ತಿ ಯೋಜನೆ ಜಾರಿಯಾದ ನಂತರ ಬಸ್​ಗಳ ಕೊರತೆ ಹೆಚ್ಚಾಗುತ್ತಿದೆ. ಸರಿಯಾದ ಸಮಯಕ್ಕೆ ವಿದ್ಯಾರ್ಥಿಗಳು ಶಾಲಾ, ಕಾಲೇಜಿಗೆ ಹೋಗಲು ಸಾಧ್ಯವಾಗದೇ ಪರದಾಡುವಂತಾಗಿದೆ.. ಬೆಳಿಗ್ಗೆ 6 ಗಂಟೆಯಿಂದಲೂ ಗಂಗಾವತಿಯಲ್ಲಿರುವ ಕಾಲೇಜಿಗೆ ಹೋಗಬೇಕಾದ ವಿದ್ಯಾರ್ಥಿಗಳು ಬಸ್​ಗಾಗಿ ಕಾದು ಕಾದು ಸುಸ್ತಾಗಿ ದಿಢೀರ್​​​ ರಸ್ತೆ ತಡೆದು ಪ್ರತಿಭಟನೆಗೆ ಮುಂದಾಗಿದ್ರು. ದಿನನಿತ್ಯವೂ ಇದೇ ಗೋಳಾಗಿದೆ ಯಾರೂ ಸಹ ಸೂಕ್ತ ಕ್ರಮವನ್ನು ಜರುಗಿಸದೇ ನಮಗೆ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.. ಸ್ಥಳಕ್ಕೆ ಕನಕಗಿರಿ ಪೊಲೀಸರು ಆಗಮಿಸಿ ವಿದ್ಯಾರ್ಥಿಗಳ ಮನವೊಲಿಕೆಗೆ ಪ್ರಯತ್ನ ಮಾಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಅಥ್ಲೀಟ್‌ ಬಿಂದು ರಾಣಿ ಮೇಲೆ ಕೋಚ್‌ ಪತ್ನಿ ದೌರ್ಜನ್ಯ..!