ರಸ್ತೆ ಕಾಮಗಾರಿ ವಿಳಂಬಕ್ಕೆ ವಿದ್ಯಾರ್ಥಿಗಳು ಹೈರಾಣ

Webdunia
ಗುರುವಾರ, 21 ಜುಲೈ 2022 (19:42 IST)
ರಸ್ತೆ ಕಾಮಗಾರಿ ವಿಳಂಬವಾಗ್ತಿದ್ದು, ವಿದ್ಯಾರ್ಥಿಗಳು ಶಾಲೆಗೆ ತೆರಳಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮಾರಗಾನಕುಂಟೆಯಲ್ಲಿ ರಸ್ತೆ ಕಾಮಗಾರಿ ಆರಂಭಿಸಿ ಹಲವಾರು ತಿಂಗಳುಗಳೇ ಕಳೆದರೂ ಸಹ ಕಾಮಗಾರಿ ಪೂರ್ಣಗೊಳಿಸಿಲ್ಲ. ಇದ್ರಿಂದಾಗಿ ಈ ಮಾರ್ಗವಾಗ ಬಸ್​​ ಸಂಚಾರ ಬಂದ್​ ಮಾಡಲಾಗಿದೆ. ಕಾಮಗಾರಿ ಪೂರ್ಣಗೊಳ್ಳದೆ ಈ ರಸ್ತೆಯ ಮಾರ್ಗದಲ್ಲಿ ಯಾವುದೇ ಬಸ್​​​ ಸಂಚಾರ ಆರಂಭಿಸುವುದಿಲ್ಲ. ವಿದ್ಯಾರ್ಥಿಗಳು ಶಾಲೆಗೆ ತೆರಳಲು 8ರಿಂದ 10ಕಿಲೋಮೀಟರ್​​ ಕಾಲ್ನಡಿಗೆಯಲ್ಲೇ ಕ್ರಮಿಸಿ ತೆರಳಬೇಕಾಗಿದೆ. ಅಧಿಕಾರಿಗಳು ಮತ್ತು ಸಂಬಂಧಪಟ್ಟವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದರೂ ಸಹ ಯಾವುದೇ ವ್ಯವಸ್ಥೆ ಕಲ್ಪಿಸಿಲ್ಲ. ಕೊಲಿಂಪಲ್ಲಿ, ಚಿನ್ನೆಪಲ್ಲಿ, ಕೃಷ್ಣಾಪುರ, ಕೊತ್ತಕೋಟೆ, ಪೆಸಲಪರ್ತಿ, ಮಾಮಿಡಿಕಾಯಲಪಲ್ಲಿ, ಮುಮ್ಮಡಿವಾರಪಲ್ಲಿ, ಜಿಲ್ಲಾಲಪಲ್ಲಿ, ಮಾಡಪಲ್ಲಿ, ಕೊತ್ತಪಲ್ಲಿ ಸೇರಿದಂತೆ ಹತ್ತಕ್ಕೂ ಹೆಚ್ಚು ಗ್ರಾಮಗಳ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ತೊಂದರೆಯಲ್ಲಿ ಸಿಲುಕಿದ್ದಾರೆ. ಈ ಬಗ್ಗೆ ಕಾಮಗಾರಿ ನಡೆಸುತ್ತಿರುವ ಲೋಕೋಪಯೋಗಿ ಇಲಾಖೆಯಾಗಲಿ, ಸಾರಿಗೆ ಇಲಾಖೆಯಾಗಲಿ ಕೊಂಚವೂ ಕಣಿಕರವಿಲ್ಲವೆಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ರು. ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿ ಪೋಷಕರು ಆಗ್ರಹಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಬ್ಬು ಬೆಳೆಗಾರರ ಸಂಧಾನದ ಬಳಿಕ ಸ್ವೀಟ್ ಹಂಚಿ ಸಂಭ್ರಮಿಸಿದ ವಿಜಯೇಂದ್ರ

ನಮಗೂ ಬೇಕು ಸ್ವಾತಂತ್ರ್ಯ: ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ನಾಯಿ ಪ್ರಿಯರ ಹೊಸ ಟ್ರೆಂಡ್

ರೈತರು ಪ್ರತಿಭಟನೆ ಮಾಡುತ್ತಿದ್ದರೆ ಕೇಂದ್ರ ಏನು ಕಳ್ಳೆಕಾಯಿ ತಿನ್ನುತ್ತಿದ್ಯಾ: ಕೃಷ್ಣ ಭೈರೇಗೌಡ ಕಿಡಿ

ರೈತರ ಪ್ರತಿಭಟನೆ ನಡುವೆ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಎಲ್ಲಿ ಹೋದ್ರು

ಮುಂದಿನ ಸುದ್ದಿ
Show comments