Webdunia - Bharat's app for daily news and videos

Install App

ಅರಣ್ಯ ಚಾರಣದಲ್ಲಿ ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು

Webdunia
ಭಾನುವಾರ, 30 ಸೆಪ್ಟಂಬರ್ 2018 (20:15 IST)
ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಪ್ರವಾಸೋದ್ಯಮ ಇಲಾಖೆಯಿಂದ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ  ಏರ್ಪಡಿಸಲಾಗಿದ್ದ ಚಂದ್ರಂಪಳ್ಳಿ ಅರಣ್ಯ ಚಾರಣ ಪ್ರವಾಸ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಚಂದ್ರಂಪಳ್ಳಿ ಅರಣ್ಯ ಪ್ರದೇಶದಲ್ಲಿ ಉತ್ಸಾಹದಿಂದ ಕುಣಿದು ಕುಪ್ಪಳಿಸಿದರು.

ಅರಣ್ಯ ಚಾರಣ (ಫಾರೆಸ್ಟ್ ಟ್ರಕ್ಕಿಂಗ್) ಪ್ರವಾಸದಲ್ಲಿ ನಾವು ಪ್ರಥಮ ಬಾರಿಗೆ ಪಾಲ್ಗೊಂಡಿದ್ದು, ಅರಣ್ಯದ ಎತ್ತರ ಮತ್ತು ಇಳಿಜಾರು ಪ್ರದೇಶಗಳನ್ನು ದಾಟುವಾಗ ರೋಮಾಂಚನಕಾರಿ ಅನುಭವವಾಯಿತು. ಅರಣ್ಯದಲ್ಲಿ ವಿವಿಧ ಜಾತಿಯ ಮರಗಳು, ಪಕ್ಷಿಗಳನ್ನು ನೋಡಿ ತಿಳಿಯಲು ಅನುಕೂಲವಾಯಿತು. ನಮ್ಮ ಕಲಬುರಗಿ ಜಿಲ್ಲೆಯಲ್ಲಿ ಇಂಥದೊಂದು ಸುಂದರವಾದ ಕಾಡಿದೆ ಎಂಬುದಕ್ಕೆ ಬಹಳ ಸಂತೋಷವಾಗುತ್ತಿದೆ ಎಂದು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮುಜೈದಾ ಖಾತೂನ ತನ್ನ ಅನುಭವವನ್ನು ಹಂಚಿಕೊಂಡು ಹರ್ಷವ್ಯಕ್ತಪಡಿಸಿದರು.

ಇದೇ ಕಾಲೇಜಿನ ಲಕ್ಷ್ಮೀ ಎಂಬ ವಿದ್ಯಾರ್ಥಿನಿ ಸ್ನೇಹಿತರ ಜೊತೆ ಅರಣ್ಯ ಚಾರಣ ಮಾಡಿರುವುದು ತುಂಬಾ ಖುಷಿ ತಂದಿದೆ. ಅರಣ್ಯ ಚಾರಣ ಪ್ರತಿ ತಿಂಗಳಿಗೊಂದು ಬಾರಿ ಕೈಗೊಂಡಲ್ಲಿ ದೇಹ ಆರೋಗ್ಯಯುತವಾಗಲು ಸಹಕಾರಿಯಾಗುತ್ತದೆ ಎಂದರು.
ಅರಣ್ಯ ಚಾರಣದಲ್ಲಿ ಪಾಲ್ಗೊಂಡಿದ್ದ ಚಿಂಚೋಳಿ ಶಾಸಕ ಡಾ. ಉಮೇಶ ಜಾಧವ ಮಾತನಾಡಿ, ಚಂದ್ರಂಪಳ್ಳಿ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಸರ್ಕಾರವು 3.5 ಕೋಟಿ ರೂ.ಗಳನ್ನು ಮಂಜೂರು ಮಾಡಿದೆ. ಚಂದ್ರಂಪಳ್ಳಿ ಡ್ಯಾಂನಲ್ಲಿ ಜಲಕ್ರೀಡೆ ಅಭಿವೃದ್ಧಿಪಡಿಸುವ ಜೊತೆಗೆ ಚಂದ್ರಂಪಳ್ಳಿ ಅರಣ್ಯವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಬೇಕೆಂದು ತಿಳಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments