Webdunia - Bharat's app for daily news and videos

Install App

ವಿದ್ಯಾರ್ಥಿಗಳಿಗೆ ಹಳೆಯ ಪಾಸ್ ಬಳಕೆಗೆ ಕೆಎಸ್ಸಾರ್ಟಿಸಿ ಅವಕಾಶ

Webdunia
ಗುರುವಾರ, 26 ಆಗಸ್ಟ್ 2021 (22:46 IST)

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಸಕ್ತ ಸಾಲಿನ ವಿದ್ಯಾರ್ಥಿಗಳ ಉಚಿತ ಅಥವಾ ರಿಯಾಯಿತಿ ದರದ ಪಾಸ್ ಗಳನ್ನು ಆನ್ ಲೈನ್ ಮುಖಾಂತರ ನೀಡುತ್ತಿದ್ದು, ಮುಂದಿನ ತಿಂಗಳು 15 ರೊಳಗೆ ಅರ್ಜಿ ಸಲ್ಲಿಸಲು ಕೋರಿದೆ. 
 

9ನೇ ತರಗತಿಯಿಂದ 12 ನೇಯ ತರಗತಿಯವರೆಗೆ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ 2021-22ನೇ ಸಾಲಿನ ಭೌತಿಕ ತರಗತಿಗಳು ಪ್ರಾರಂಭವಾಗಿದ್ದು, ಸಾರಿಗೆ ನಿಗಮದ ವತಿಯಿಂದ ವಿದ್ಯಾರ್ಥಿ ಹಳೆಯ ಬಸ್ ಪಾಸುಗಳನ್ನು ಬಳಸಿ ಆಗಸ್ಟ್ 2021ರ ಅಂತ್ಯದವರೆಗೆ ಪ್ರಯಾಣಿಸಲು ಈ ಹಿಂದೆ ಅನುಮತಿಸಲಾಗಿತ್ತು. ಪ್ರಸಕ್ತ ವರ್ಷವೂ ಸಹ ಎಲ್ಲಾ ವಿದ್ಯಾರ್ಥಿಗಳು ಸೇವಾಸಿಂದು ಪೋರ್ಟಲ್ ಮುಖಾಂತರ ಬಸ್ ಪಾಸುಗಳನ್ನು ಪಡೆಯಬೇಕಿದ್ದು, ಆನ್ಲೈನ್ ಮುಕಾಂತರ ಅರ್ಜಿ ಸಲ್ಲಿಸಲು ಸಾರಿಗೆ ಸಂಸ್ಥೆ ಹೇಳಿದೆ.ಯವರೆಗೆ ಹಳೆಯ ಪಾಸ್ ಅಥವಾ ಶಾಲಾ ಕಾಲೇಜಿನ ಗುರುತಿನ ಚೀಟಿ ಬಳಸಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಸಂಸ್ಥೆ ತಿಳಿಸಿದೆ.

ಪಾಸ್ ವಿತರಣೆಯ ತಂತ್ರಾಂಶವನ್ನು ಸಂಪೂರ್ಣ ಆನ್ಲೈನ್ ಮಾಡಿರುವುದರಿಂದ, ವಿದ್ಯಾರ್ಥಿಗಳಿಗೆ ಕಾಲಾವಕಾಶ ನೀಡಲಾಗಿದ್ದು, 2020-21 ಸಾಲಿನಲ್ಲಿ ಪಡೆದಿರುವ ವಿದ್ಯಾರ್ಥಿ ಬಸ್ ಪಾಸುಗಳನ್ನು ಬಳಸಿ ಪ್ರಯಾಣಿಸಲು ಹಾಗೂ ಕಳೆದ ಸಾಲಿನಲ್ಲಿ ವಿದ್ಯಾರ್ಥಿ ಬಸ್ ಪಾಸುಗಳನ್ನು ಪಡೆಯದಿರುವ ವಿದ್ಯಾರ್ಥಿಗಳು ಹೊಸದಾಗಿ ಶಾಲೆ ಅಥವಾ ಕಾಲೇಜಗಳಲ್ಲಿ ಪಾವತಿಸಿರುವ ರಶೀದಿ ಹಾಗೂ ವಿದ್ಯಾಸಂಸ್ಥೆಯ ಗುರುತಿನ ಚೀಟಿಯೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ಮಾಹಿತಿ ನೀಡಿದೆ.

ಸಂಬಂಧಪಟ್ಟ ಮಾರ್ಗದಲ್ಲಿ ಅಥವಾ ಹೊಸ ವಿಳಾಸದಲ್ಲಿರುವ ಶಾಲಾ ಕಾಲೇಜುಗಳ ವಿಳಾಸವನ್ನು ಆನ್ಲೈನ್ ಮುಕಾಂತರ ನಮೂದಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ತುಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಂಸ್ಥೆ ಹೇಳಿದೆ
ವಿದ್ಯಾರ್ಥಿಗಳು ಪಾಸ್ ಪಡೆಯಲು ಸೆಪ್ಟೆಂಬರ್ 15 ರೊಳಗೆ ನಿಯಮಾನುಸಾರ ಉಚಿತ ಅಥವಾ ರಿಯಾಯಿತಿ ಪಾಸುಗಳನ್ನು ಪಡೆಯಲು ಸೇವಾಸಿಂದು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಸಂಸ್ಥೆ ಕೋರಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

ಮುಂದಿನ ಸುದ್ದಿ
Show comments