Webdunia - Bharat's app for daily news and videos

Install App

ಸುಭಾಷ್ ಬಿ ಅಡಿ ಪದಚ್ಯುತಿ ಪ್ರಸ್ತಾಪ ಮಂಡನೆ: ತೀವ್ರ ಗದ್ದಲದಿಂದ ಸದನ ಮುಂದೂಡಿಕೆ

Webdunia
ಶುಕ್ರವಾರ, 27 ನವೆಂಬರ್ 2015 (11:45 IST)
ಉಪಲೋಕಾಯುಕ್ತ ಸುಭಾಷ್ ಬಿ ಅಡಿ ಅವರ ಪದಚ್ಯುತಿಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಚರ್ಚೆ ನಡೆದು, ವಿಧಾನಸಭೆಯಲ್ಲಿ ಶಾಸಕ ತನ್ವೀರ್ ಸೇಠ್ ಸುಭಾಷ್ ಅಡಿ ಪದಚ್ಯುತಿ ಪ್ರಸ್ತಾಪವನ್ನು ಮಂಡಿಸಿದರು.  ಈ ಸಂದರ್ಭದಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ನಾವು ಲೋಕಾಯುಕ್ತ ವಜಾಕ್ಕೆ ಪ್ರಯತ್ನಿಸುತ್ತಿರುವ ನಡುವೆ ಉಪಲೋಕಾಯುಕ್ತರನ್ನೂ ವಜಾ ಮಾಡಿ ಲೋಕಾಯುಕ್ತ ಸಂಸ್ಥೆಯನ್ನೇ ಮುಚ್ಚುವ ಹುನ್ನಾರವನ್ನು ಸರ್ಕಾರ ನಡೆಸಿದೆ ಎಂದು ಶೆಟ್ಟರ್ ಆರೋಪಿಸಿದರು.

 ಪದಚ್ಯುತಿ ಪ್ರಸ್ತಾಪವನ್ನು ಮತಕ್ಕೆ ಹಾಕಬೇಕು ಎಂದು ಜಗದೀಶ್ ಶೆಟ್ಟರ್ ಒತ್ತಾಯಿಸಿದರು. ಆದರೆ ಬಿಜೆಪಿ ಸದನದ ಬಾವಿಯಲ್ಲಿ ಧರಣಿ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಸ್ಪೀಕರ್ ಪ್ರಸ್ತಾಪವನ್ನು ಮತಕ್ಕೆ ಹಾಕಲು ಅವಕಾಶ ಕೊಡಲಿಲ್ಲ. ಕೋಪಗೊಂಡ ಶೆಟ್ಟರ್ ಪ್ರಸ್ತಾಪದ ಪ್ರತಿಯನ್ನೇ ಹರಿದುಹಾಕಿದರು.  ಕಲಾಪ ನಡೆದ 20 ನಿಮಿಷಗಳಲ್ಲಿ ಕೆಲವು ವಿಧೇಯಕಗಳನ್ನು ಮಂಡಿಸಲಾಯಿತು.

ಈ ನಡುವೆ ಸಚಿವ ಆಂಜನೇಯ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಪಕ್ಷದ ಸದಸ್ಯರು ಸದನದ ಬಾವಿಗೆ ಇಳಿದು ಮತ್ತೆ ಧರಣಿ ನಡೆಸಿದರು. ತೀವ್ರ ಗದ್ದಲದ ಹಿನ್ನೆಲೆಯಲ್ಲಿ ಸ್ಪೀಕರ್ ಸದನವನ್ನು 30 ನಿಮಿಷಗಳ ಕಾಲ ಮುಂದೂಡಿದರು.  ಈ ನಡುವೆ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್,  ಸುಭಾಷ್ ಅಡಿ ವಜಾ ಮಾಡುವ ಪ್ರಸ್ತಾಪ ಮಂಡನೆ ಸಂಸದೀಯ ನಡವಳಿಕೆಗೆ ವಿರುದ್ಧವಾದ ನಿರ್ಧಾರ ಎಂದು ಟೀಕಿಸಿದರು. ಲೋಕಾಯುಕ್ತರ ವಜಾಕ್ಕೆ ಸಹಿ ಸಂಗ್ರಹ ಮಾಡುವ ಜತೆಯಲ್ಲಿ ಉಪಲೋಕಾಯುಕ್ತರ ಪದಚ್ಯುತಿಗೆ ಸರ್ಕಾರ ಪ್ರಯತ್ನಿಸುವ ಮೂಲಕ ಲೋಕಾಯುಕ್ತ ಸಂಸ್ಥೆಯನ್ನೇ ಮುಚ್ಚಲು ಹೊರಟಿದೆ ಎಂದು ಆರೋಪಿಸಿದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments