Webdunia - Bharat's app for daily news and videos

Install App

ರೌಡಿ ಕೊತ್ವಾಲನ ಶಿಷ್ಯ ಡಿಕೆಶಿ ನಡೆದು ಬಂದ ದಾರಿಯೇ ಅಂತಹದ್ದು: ಜೆಡಿಎಸ್‌

Sampriya
ಭಾನುವಾರ, 2 ಮಾರ್ಚ್ 2025 (17:13 IST)
ಬೆಂಗಳೂರು: ಸಿನಿಮಾ ರಂಗದವರಿಗೆ ಡಿಕೆ ಶಿವಕುಮಾರ್ ಅವರು ಎಚ್ಚರಿಕೆ ಕೊಟ್ಟ ವಿಚಾರಕ್ಕೆ ಜೆಡಿಎಸ್ ಆಕ್ರೋಶ ಹೊರಹಾಕಿ, ವಿನಾಶ ಕಾಲೇ ವಿಪರೀತ ಬುದ್ಧಿ ಎಂದು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದೆ.

ಈ ಬಗ್ಗೆ ಜೆಡಿಎಸ್‌ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದೆ.

ರೌಡಿ ಕೊತ್ವಾಲನ ಶಿಷ್ಯ ಡಿಕೆಶಿ ನಡೆದು ಬಂದ ದಾರಿ, ಬೆಳೆದು ಬಂದ ಪರಿಸರ, ಜೊತೆಗಿದ್ದವರ ಸಹವಾಸವೇ ಅಂತಹದ್ದು.

ಮಿಸ್ಟರ್ ಶಿವಕುಮಾರ್‌ ನಿಮ್ಮ ಪಾದಯಾತ್ರೆ ರಾಜಕೀಯ ಪ್ರೇರಿತವಾಗಿತ್ತು. ಕಾಂಗ್ರೆಸ್ ಪಕ್ಷದ ರಾಜಕೀಯ ಪಾದಯಾತ್ರೆಗೆ ಸಿನಿಮಾ ಕಲಾವಿದರು ಭಾಗವಹಿಸಲಿಲ್ಲ ಎಂದು ಕನ್ನಡದ ನಟರಿಗೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ವೇದಿಕೆಯಲ್ಲಿ ಬೆದರಿಕೆ ಹಾಕಿರುವುದು ಹೇಡಿತನ ಮತ್ತು ಖಂಡನೀಯ.

ಡಿಸಿಎಂ  ಈ ಗೊಡ್ಡು ಬೆದರಿಕೆ ನಿಮ್ಮ ಹತಾಶೆ ಮತ್ತು ನೀವು ಮಾನಸಿಕ ಸ್ಥಿಮಿತ ಕಳೆದುಕೊಂಡಿರುವುದನ್ನು ತೋರಿಸುತ್ತಿದೆ. ಕನ್ನಡ ಚಿತ್ರರಂಗ ಹಾಗೂ ಸಿನಿಮಾ ಕಲಾವಿದರು ಯಾವುದೇ ಪಕ್ಷದ ಕಾಲಾಳುಗಳಲ್ಲ. ಅವರು ಯಾರನ್ನು , ಯಾವ ಪಕ್ಷವನ್ನು ಬೆಂಬಲಿಸಬೇಕು ? ಎನ್ನುವುದು ಅವರ ವಯಕ್ತಿಕ ತೀರ್ಮಾನ.

ನಮ್ಮದು  ಪ್ರಜಾಪ್ರಭುತ್ವ, ಸಂವಿಧಾನದ ಅಡಿಯಲ್ಲಿ ನೀವು ಡಿಸಿಎಂ ಆಗಿದ್ದೀರಿ. ರೌಡಿಸಂ, ಧಮ್ಕಿ  ರಾಜಕೀಯ ಯಾರಿಗೂ ಶೋಭೆ ತರುವುದಿಲ್ಲ. ಕನಕಪುರವನ್ನು ರಿಪಬ್ಲಿಕ್ ಮಾಡಿಕೊಂಡು ದರ್ಪ, ದೌರ್ಜನ್ಯ, ಬೆದರಿಕೆ ಹಾಕಿ ಜನರನ್ಮು ಹಿಂಸಿಸುತ್ತಾ, ಬಂಡೆಗಳನ್ನು ಖಾಲಿ ಮಾಡಿರುವ ಅಪೂರ್ವ ಸಹೋದರರಿಗೆ ಮತದಾರರು  ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಹಾಗೂ‌‌ ಬೆಂ.ಗ್ರಾಮಾಂತರದಲ್ಲಿ ನಿಮ್ಮ ಸಹೋದರನಿಗೆ ನಟ್ಟು, ಬೋಲ್ಟು ಸರಿಮಾಡಿದ್ದಾರೆ.

ಇನ್ನೂ ಸಿಎಂ ಕುರ್ಚಿಗೆ ಏರಲು ತಿರುಕನ ಕನಸು ಕಾಣುತ್ತಾ ಅಡ್ಡದಾರಿ, ತಂತ್ರ ಕುತಂತ್ರ ವಾಮಮಾರ್ಗದಲ್ಲಿ ಸಾಗಿರುವ ನಿನಗೆ ಕಾಂಗ್ರೆಸ್ ಪಾರ್ಟಿಯವರೇ ನಟ್ಟು, ಬೋಲ್ಟು ಟೈಟು ಮಾಡುತ್ತಿದ್ದಾರೆ ಅಷ್ಟು ಸಾಲದೇ ಎಂದಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments