Webdunia - Bharat's app for daily news and videos

Install App

ಆತ್ಮಹತ್ಯೆ ಮಾಡಿಕೊಂಡ ದಂಪತಿಗೆ ಕೋವಿಡ್ ನೆಗೆಟಿವ್!

Webdunia
ಮಂಗಳವಾರ, 17 ಆಗಸ್ಟ್ 2021 (19:36 IST)
ಕುಳಾಯಿ ಚಿತ್ರಾಪುರದಲ್ಲಿ ಆತ್ಮಹತ್ಯೆ ಮಾಡಿಕೊಂಡ ರಮೇಶ್ ಹಾಗೂ ಗುಣವತಿ ದಂಪತಿಗೆ ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ ಎಂದು ಮಂಗಳೂರು ಡಿಸಿಪಿ
ಹರಿರಾಂ ಶಂಕರ್ ತಿಳಿಸಿದ್ದಾರೆ.
ಪೋಸ್ಟ್ ಮಾರ್ಟಮ್‌ಗೂ ಮುನ್ನ ನಡೆಸಿದ ಮೃತದೇಹದ ಕೋವಿಡ್ ಟೆಸ್ಟ್ ನಲ್ಲಿ ರಿಪೋರ್ಟ್ ನೆಗೆಟಿವ್‌ ಬಂದಿದೆ. ರಿಪೋರ್ಟ್ ನೆಗೆಟಿವ್ ಬೆನ್ನಲ್ಲೇ ಮೃತದೇಹದ ಪೋಸ್ಟ್ ಮಾರ್ಟಮ್ ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೋವಿಡ್ ಬಂದಿದೆ ಎಂಬ ಆತಂಕದಲ್ಲಿ ರಮೇಶ್ ಮತ್ತು ಗುಣ ದಂಪತಿ ನೇಣಿಗೆ ಶರಣಾಗಿದ್ದರು. ಮಂಗಳೂರು ಹೊರವಲಯದ ಕುಳಾಯಿಯ ರಹಜಾ ಅಪಾರ್ಟ್‌ಮೆಂಟ್ ನಲ್ಲಿ ಈ ಘಟನೆ ನಡೆದಿತ್ತು. ರಮೇಶ್ ಪತ್ನಿ ಗುಣ ಮಧುಮೇಹ ಖಾಯಿಲೆಯಿಂದ ಬಳಲುತ್ತಿದ್ದರು. ಡೆತ್ ನೋಟ್ ನಲ್ಲಿ ಕೊರೊನಾ ಲಕ್ಷಣಗಳು ಕಾಣುತ್ತಿರುವ ನಮಗೆ ಜೀವನವೇ ಬೇಡ ಎಂಬ ಮನಸ್ಥಿತಿಗೆ ಬಂದಿದ್ದೇವೆ. ಈಗ ನನ್ನ ಪತಿಗೂ ಕೊರೊನಾ ಗುಣಲಕ್ಷಣ ಕಾಣಿಸಿಕೊಳ್ಳುತ್ತಿದೆ. ಬ್ಲ್ಯಾಕ್ ಫಂಗಸ್ ನಿಂದ ಕಣ್ಣು ಮತ್ತು ಇತರ ಭಾಗಗಳನ್ನು ಕಳೆದುಕೊಂಡಿದ್ದನ್ನು ನೋಡಿದಾಗ, ನಮ್ಮ ಆರೋಗ್ಯದಲ್ಲಿ ಆಗುತ್ತಿರುವ ಬದಲಾವಣೆಗಳನ್ನು ನೋಡಿದಾಗ ನಮಗೂ ಭಯ ಕಾಡುತ್ತಿದೆ. ನಮಗೆ ಜೀವನವೇ ಬೇಡ ಎಂಬ ಮನಸ್ಥಿತಿಗೆ ಬಂದಿದ್ದೇವೆ ಎಂದು ಮರಣ ಪತ್ರದಲ್ಲಿ ಉಲ್ಲೇಖಿಸಿದ್ದರು. ಇದಲ್ಲದೆ ಗುಣವತಿ ಅವರಿಗೆ ಇತರ ಆರೋಗ್ಯ ಸಮಸ್ಯೆಯೂ ಇರುವುದನ್ನು ಬರೆದುಕೊಂಡ ದಂಪತಿಗೆ ಮಕ್ಕಳಿಲ್ಲ ಕೊರಗು ಕೂಡಾ ಕಾಡಿತ್ತು ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೈಲಟ್ ಮಾಡಿದ ಡ್ರಾಮಾಕ್ಕೆ ವಿಮಾನ ಹಾರದೆ 1 ಗಂಟೆ ಕಾದು ಸುಸ್ತಾದ ಡಿಸಿಎಂ ಏಕನಾಥ ಶಿಂದೆ

ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿಯವರು ಈಗ ಎಲ್ಲಿದ್ದಾರೆ: ಶೋಭಾ ಕರಂದ್ಲಾಜೆ

Chinnaswamy Stampede: ಗೋವಿಂದರಾಜ್‌ಗೆ ಗೇಟ್‌ಪಾಸ್‌: ಸರ್ಕಾರಕ್ಕೆ ಜ್ಞಾನೋದಯವಾಯ್ತು ಎಂದ ಎಚ್‌ಡಿಕೆ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

ಮುಂದಿನ ಸುದ್ದಿ
Show comments