Webdunia - Bharat's app for daily news and videos

Install App

ಮೈಸೂರಿನಲ್ಲಿ ಸುಡಾನ್ ವಿದ್ಯಾರ್ಥಿಗಳ ಪುಂಡಾಟ

Webdunia
ಭಾನುವಾರ, 1 ಮೇ 2016 (10:26 IST)
ಅಡ್ಡಾದಿಡ್ಡಿ ಕಾರು ಚಲಾಯಿಸಿದ್ದನ್ನು ಪ್ರಶ್ನಿಸಿದ ವೈದ್ಯರ ಮೇಲೆ ಸೂಡಾನ್ ವಿದ್ಯಾರ್ಥಿಗಳು ಹಲ್ಲೆ ನಡೆಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. 
 
ನಗರದ ಅಗ್ರಹಾರದಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದ್ದು ಮೂವರು ಪುಂಡ ವಿದ್ಯಾರ್ಥಿಗಳು ಕಾರ್ತಿಕ್ ಉಡುಪಾ ಎಂಬ ವೈದ್ಯರ ಕಾರ್‌ನ್ನು ಓವರ್ ಟೇಕ್ ಮಾಡಲು ಹೋಗಿ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಕಾರ್ ನಿಲ್ಲಿಸಿದ ವೈದ್ಯರು ಈ ಕುರಿತು ಪ್ರಶ್ನಿಸಿದ್ದಕ್ಕೆ
ಅವಾಚ್ಯ ಶಬ್ಧಗಳಿಂದ ನಿಂದಿಸಿದ ಸೂಡಾನ್ ವಿದ್ಯಾರ್ಥಿಗಳು ಹಲ್ಲೆ ಕೂಡ ನಡೆಸಿದ್ದಾರೆ.
 
ಕಾರಿನಲ್ಲಿದ್ದ ಕಾರ್ತಿಕ್ ಅವರ ಪತ್ನಿ ಮತ್ತು ಸ್ನೇಹಿತ ಡಾ. ದೀಪಕ್ ಮೇಲೂ ಕೂಡ ದಾಳಿ ನಡೆಸಿದ ಪುಂಡ ಯುವಕರು ಅವರನ್ನು ಗಂಭೀರವಾಗಿ ಗಾಯಗೊಳಿಸಿದ್ದಾರೆ.
 
ಘಟನೆಯಲ್ಲಿ ಕಾರ್ತಿಕ್ ಕಣ್ಣಿಗೆ ಬಲವಾಗಿ ಹೊಡೆದು ಟೀಶರ್ಟ್ ಹರಿದು ಹಾಕಿದ್ದಲ್ಲದೇ, ಅವರ ಪತ್ನಿ ಮೇಲೂ ಹಲ್ಲೆಗೆ ಯತ್ನಿಸಿದ್ದಾರಂತೆ. ಅಲ್ಲದೇ ಕಾರ್ತಿಕ್ ಕಾರಿನಲ್ಲಿದ್ದ ಸ್ನೇಹಿತ  ಮೇಲೂ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.
 
ಮೈಸೂರಿನ ಕೆಆರ್ ಠಾಣೆಯಲ್ಲಿ ಮೂವರ ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments