Webdunia - Bharat's app for daily news and videos

Install App

ಕೇರಳಗೆ ಹೋಲಿಸಿದರೆ ನಮ್ಮಲ್ಲಿ ಕೊರೊನಾ ಕೇಸ್ ಕಡಿಮೆ: ಸಚಿವ ಸುಧಾಕರ್

Webdunia
ಮಂಗಳವಾರ, 13 ಜುಲೈ 2021 (20:32 IST)
ಕೊರೊನಾ ಎರಡನೇ ಅಲೆ ಕಡಿಮೆ ಆಗಿದ್ದರೂ ಮೂರನೇ ಅಲೆ ಬರೋದಿಲ್ಲ ಅಂತೇನಿಲ್ಲ. ಆದರೂ ಜನರು ಮುನ್ನೆಚ್ಚರಿಕೆ ಇಲ್ಲದೇ ಸೇರುವುದು ನೋಡಿದರೆ ಭಯ ಆಗುತ್ತದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ ದೇವಸ್ಥಾನ, ಮಾರ್ಕೆಟ್ ಗಳಲ್ಲಿ ಮಿತಿಮೀರಿದ ಸಂಖ್ಯೆಯಲ್ಲಿ ಸೇರುತ್ತಿದ್ದಾರೆ. ಇದನ್ನು ಗಮನಿಸಿದರೆ ಭಯವಾಗುತ್ತದೆ. ಜನರು ಎಚ್ಚರಿಕೆಯಿಂದ ಇರಬೇಕು ಎಂದರು.
ಮೂರನೇ ಅಲೆ ಎದುರಾಗುವ ಅವಕಾಶ ನಾವು ಕೊಡಬಾರದು. ನಮ್ಮ ನಡವಳಿಕೆಗಳಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ನೂರು ಜನಕ್ಕೆ ಮದುವೆಗೆ ಅವಕಾಶ ಕೊಡಲಾಗಿದೆ. ಆದರೆ ನಾನ್ನೂರು ಐನೂರು ಜನ ಸೇರುತ್ತಿದ್ದಾರೆ. ಮಾರುಕಟ್ಟೆಗಳಲ್ಲಿ ಮಿತಿಮೀರಿದ ಜನ ಸೆರುತ್ತಿದ್ದಾರೆ. ಇದು ಬಹಳ ಅಸಮಾಧಾನ ಆಗಿದೆ. ಇನ್ನೂ ಮೂರರಿಂದ ನಾಲ್ಕು ತಿಂಗಳ ಕಾಲ ಎಚ್ಚರಿಕೆಯಿಂದ ಇರಬೇಕು ಎಂದು ಅವರು ಸಲಹೆ ನೀಡಿದರು.
ನೈಟ್ ಕರ್ಪ್ಯೂ ಮುಂದುವರೆಸಬೇಕಾ ಅಥವಾ ನಿಲ್ಲಿಸಬೇಕಾ ಎಂಬ ವಿಚಾರದ ಕುರಿತು ಸಂಜೆ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡುತ್ತೇನೆ. ನಂತರ ಇದರ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಲಸಿಕೆಯನ್ನು ತೆಗೆದು ಕೊಂಡರೂ ಎಚ್ಚರಿಕೆಯಿಂದ ಇರಬೇಕು ಎಂದು ಸುಧಾಕರ್ ಹೇಳಿದರು.
ಕೇರಳ ಮತ್ತು ಮಹಾರಾಷ್ಟ್ರಗಳಲ್ಲಿ ಕೊರೊನಾ ಕೇಸ್ ಗಳು ಹೆಚ್ಚಾಗಿವೆ. ನಮ್ಮ ರಾಜ್ಯದಂತೆ ಕೇರಳದಲ್ಲಿ ಎರಡನೇ ಅಲೆ ಕಡಿಮೆ ಆಗಲೇ ಇಲ್ಲ. ಪಾಸಿಟಿವಿಟಿ ರೇಟ್ ಕಡಿಮೆ ಆಗಲೇ ಇಲ್ಲ. ಕರ್ನಾಟಕದಲ್ಲಿ ಬಹಳ ಕಡಿಮೆ ಆಗಿದೆ. ಇನ್ನೂ ಕಡಿಮೆ ಆಗಬೇಕು. ಮೂರು ಸಾವಿರ ಕೇಸ್ ಗಿಂತ ಹೆಚ್ಚು ಪಾಸಿಟಿವ್ ಕೇಸ್ ಬಂದರೆ ಅದು ನಮಗೆ ಎಚ್ಚರಿಕೆ ಗಂಟೆ. ಎರಡನೇ ಅಲೆಯಂತೆ ಮತ್ತೆ ಮರುಕಳಿಸದಂತೆ ಎಚ್ಚರಿಕೆ ವಹಿಸುತ್ತೇವೆ. ಮೂರನೇ ಅಲೆ ಪ್ರಾರಂಭವಾಗಿಲ್ಲ. ಕೆಲವು ದಿನಗಳು ಕಾಯಬೇಕು ನಂತರ ಗೊತ್ತಾಗುತ್ತೆ ಎಂದು ಅವರು ವಿವರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments