Webdunia - Bharat's app for daily news and videos

Install App

ಕೈಗೆ ಬಾರದ ಕಬ್ಬು ಬಾಕಿ ಬಿಲ್ಲು: ದಯಾಮರಣಕ್ಕೆ ಅರ್ಜಿ ಸಲ್ಲಿಸಿದ ರೈತರು

Webdunia
ಸೋಮವಾರ, 2 ಜುಲೈ 2018 (18:37 IST)
ಕುಂದಾನಗರಿ ಬೆಳಗಾವಿಯ ರೈತರ ಗೋಳು  ಹೇಳತ್ತಿರದ್ದಾಗಿದೆ.  ಕಷ್ಟ ಪಟ್ಟು ಬೆಳೆದ ಬೆಳೆಗೆ  ಬೆಂಬಲ ಬೆಲೆ  ಸಿಗಲ್ಲ ಅನ್ನೊ ನೋವು ಒಂದು ಕಡೆಯಾದರೆ,  ಸಾಲಮಾಡಿ  ಕಬ್ಬು  ಬೆಳೆದು ಕಾರ್ಖಾನೆಗೆ ಕಳುಹಿಸಿ  ಐದು ವರ್ಷ ಕಳೆದರೂ ಇನ್ನು ರೈತರ ಕೈಗೆ ಕಾರ್ಖಾನೆಗಳಿಂದ  ಕಬ್ಬಿನ ಬಾಕಿ ಬಿಲ್ಲ  ಕೈ ಸೇರಿಲ್ಲ ಅನ್ನೊ ನೋವು ಇನ್ನೊಂದು ಕಡೆ. ಕಬ್ಬಿನ ಬಾಕಿ  ಬಿಲ್ಲು ನೀಡುವಂತೆ ವರ್ಷಗಳಿಂದ ಬೇಡಿಕೊಂಡರೂ  ಜಿಲ್ಲಾಡಳಿತ ಮಾತ್ರ ಕಣ್ಣು ಮುಚ್ಚಿ ಕುಳಿತ್ತಿದೆ. ಇನ್ನು  ಇತ್ತ ಸಾಲಕ್ಕೆ  ಹೆದರಿ ರಾಜ್ಯ ಸರ್ಕಾರಕ್ಕೆ ಮತ್ತು  ಜಿಲ್ಲಾಡಳಿತಕ್ಕೆ    ರೈತರು ದಯಾಮರಣಕ್ಕೆ ಅರ್ಜಿ ಬರೆದಿದ್ದಾರೆ.

 
ಒಂದು ಕಡೆ ಅನ್ನ ಬೆಳೆಯುವ ರೈತ ಸಾಲದ‌ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆಗೆ ಶರಣಾಗುತ್ತಿದ್ದರೆ. ಇನ್ಮೊಂದು ಕಡೆ ಅತಿವೃಷ್ಟಿ ಅನಾವೃಷ್ಠಿಯಿಂದ ಕಂಗಾಲಾಗುತ್ತಿದ್ದಾನೆ. ಆದರೆ ಈ ಕುಂದಾನ ನಗರಿ ಬೆಳಗಾವಿಯಲ್ಲಿ ರೈತ ಕುಟುಂಬಗಳು  ಕಬ್ಬಿನ ಬಾಕಿ ಬಿಲ್ಲಗಾಗಿ ಮನನೊಂದು ದಯಾಮರಣಕ್ಕೆ ಅರ್ಜಿ  ಬರೆದಿದ್ದಾರೆ. ಹೌದು ಈ ಸರ್ಕಾರಕ್ಕೆ  ಯಾವಾಗ ಈ ರೈತರ ನೋವಿನ ಕೂಗು ಕೇಳಿಸುತ್ತೊ ಆ ದೇವರೆ ಬಲ್ಲ. ಮೊನ್ನೆಯಷ್ಟೆ ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಲಿಂಗನಮಠ ಗ್ರಾಮದ ರೈತರು ದಯಾಮರಣಕ್ಕೆ  ಕೇಂದ್ರ ಸರ್ಕಾರಕ್ಕೆ ಮತ್ತು ರಾಜ್ಯ ಸರ್ಕಾರಕ್ಕೆ  ಅರ್ಜಿ ಸಲ್ಲಿಸಿದ್ದರು . ಈಗಾ ಮತ್ತೆ ಇವತ್ತು  ಅದೇ ಖಾನಾಪುರ ತಾಲೂಕಿನ‌ ದೇವಲತ್ತಿ ಗ್ರಾಮದ ರೈತ ಕುಟುಂಬಗಳು ಮತ್ತೆ  ದಯಾಮರಣಕ್ಕೆ ಅರ್ಜಿ ಸಲ್ಲಿಸಿದ್ದಾರೆ.

 ದೇವಲತ್ತಿ ಗ್ರಾಮದ ಪುಂಡಲಿಕ್  ಕುಟುಂಬದ, ಉಮೇಶ್ ಕುಟುಂಬ ಸೇರಿದಂತೆ ಸುಮಾರು 5 ಕುಟುಂಬಗಳು  ಕಬ್ಬಿ‌ನ  ಬಾಕಿ ವಸೂಲಿ ಮಾಡಿಕೊಡಬೇಕು ಎಂದು ಆಗ್ರಹಿಸಿ  ಜಿಲ್ಲಾಧಿಕಾರಿಗೆ ದಯಾಮರಣಕ್ಕೆ ಅರ್ಜಿ ಸಲ್ಲಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಒಡಿಶಾ: 3 ಅಪ್ರಾಪ್ತರ ಮೇಲೆ ನಿರಂತರ ಅತ್ಯಾಚಾರ, ಕಾಮುಕನಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್‌

ಕ್ರಿಕೆಟಿಗ ಸಚಿನ್ ಮಗಳು ಸಾರಾಗೆ ಜಾಗತಿಕ ಮಟ್ಟದಲ್ಲಿ ಒಲಿಯಿತು ದೊಡ್ಡ ಅದೃಷ್ಟ

ನಾಯಿ ಬೊಗಳಿತೆಂದು ತೋಟಕ್ಕೆ ಹೋದ ರೈತ: ಆನೆ ದಾಳಿಯಿಂದ ಸಾವು

10 ವರ್ಷದ ಹಿಂದೆ ದೂರವಾದ ಪತ್ನಿ ಮುಗಿಸಲು ಸಾಧು ವೇಷ ಧರಿಸಿದ ಪತಿ, ಮುಂದೇ ಆಗಿದ್ದೆ ಭಯಾನಕ ಕೃತ್ಯ

ಮುಂದಿನ ಸುದ್ದಿ
Show comments