ಅಂಬರೀಶ್ ಗೆ ಕಬ್ಬಿನ ಅಲಂಕಾರ ಏಕೆ ಗೊತ್ತಾ?

Webdunia
ಗುರುವಾರ, 6 ಡಿಸೆಂಬರ್ 2018 (18:10 IST)
ಚಲನಚಿತ್ರ ಹಿರಿಯ ನಟ ಹಾಗೂ ಕೇಂದ್ರ ಮಾಜಿ ಸಚಿವ, ರೆಬಲ್ ಸ್ಟಾರ್ ಅಂಬರೀಶ್ ಗೆ ಅವರ ಅಭಿಮಾನಿಗಳು ವಿನೂತನವಾಗಿ ಗೌರವ ನಮನ ಸಲ್ಲಿಸುತ್ತಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಬಿ.ಹೊಸೂರು ಗ್ರಾಮದಲ್ಲಿ ಅಭಿಮಾನಿಗಳಿಂದ ಅಗಲಿದ ಚಿತ್ರನಟ ಅಂಬರೀಶ್ ರ ತಿಥಿ ಕಾರ್ಯ ನೆರವೇರಿತು. ಗ್ರಾಮಸ್ಥರು ಅಂಬಿಯ ಪ್ರತಿಮೆಗೆ ಕಬ್ಬಿನಿಂದ ಅಲಂಕಾರ ಮಾಡಿ ಗೌರವ ಸಲ್ಲಿಸಿದರು. ಅಂಬಿ ಪ್ರತಿಮೆಗೆ ನಾಟಿ ಕೋಳಿ, ಮುದ್ದೆ ಎಡೆಯಿಟ್ಟು ನಮನ ಸಲ್ಲಿಸಿದರು.

ಅಂಬಿ ಪ್ರತಿಮೆಯನ್ನು ಕಬ್ಬಿನಿಂದ ಅಲಂಕರಿಸಿ, ಕಬ್ಬಿನ ಹಾರ ಹಾಕಿ ವಂದನೆ ಸಲ್ಲಿಸಲಾಯಿತು. ಅಂಬಿಯನ್ನು ನೆನೆದು ಭಾವುಕರಾಗುತ್ತಿರುವ ಅಭಿಮಾನಿಗಳು, ತಮ್ಮ ಮೆಚ್ಚಿನ ನಟನ ಗುಣಗಾನ ಮಾಡಿದರು.

ಅಂಬಿ ಮೃತಪಟ್ಟ ನಂತರ ಬಿ.ಹೊಸೂರು ಗ್ರಾಮದಲ್ಲಿ ಪ್ರತಿಮೆಯನ್ನು ಗ್ರಾಮಸ್ಥರು ಸ್ಥಾಪಿಸಿದ್ದಾರೆ. ಪ್ರತಿಮೆಗೆ ಕಬ್ಬಿನಿಂದ ಅಲಂಕಾರ ಮಾಡಿ, ಕಬ್ಬಿನ ಹಾರ ಹಾಕಿ ತವರು ಜಿಲ್ಲೆಯ ಗೌರವ ಸಲ್ಲಿಸುತ್ತಿರುವ ಅಭಿಮಾನಿಗಳು, ಅಗಲಿದ ಚೇತನಕ್ಕೆ ನಮನ ಸಲ್ಲಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments