ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಕಬ್ಬುಬೆಳೆಗಾರರ ಎಚ್ಚರಿಕೆ

Webdunia
ಗುರುವಾರ, 15 ಡಿಸೆಂಬರ್ 2022 (18:55 IST)
ಕಬ್ಬು ಬೆಳೆಗಾರರ ಹೋರಾಟ 24 ನೇ ದಿನಕ್ಕೆ ಕಾಲಿಟ್ಟಿದ್ದು, ಫ್ರೀಡಂಪಾರ್ಕ್ ನಲ್ಲಿ ರೈತರ ಮುಷ್ಕರ ನಡೆಯುತ್ತಿದೆ.ಕಬ್ಬು ಬೆಳೆಗೆ ದರ ನಿಗದಿ ಮಾಡುವಂತೆ ರೈತರು ಧರಣಿ ನಡೆಸುತ್ತಿದ್ದು,ಇಂದು ಮೌನ ಧರಣಿ ಮಾಡುವುದರ ಮೂಲಕ ರೈತರು ಪ್ರತಿಭಟನೆ ಮಾಡಿದ್ದಾರೆ.ಕಬ್ಬಿನ ಬೆಂಬಲ ಬೆಲೆ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ರೈತರು ಆಗ್ರಹಿಸಿದ್ದು,ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಮುಷ್ಕರ ನಡೆಸಲಾಗ್ತಿದೆ.ಕಬ್ಬು ಬೆಳೆಗಾರರ ಪ್ರತಿಭಟನೆಗೆ ರಾಜ್ಯದ ರೈತ ಸಂಘಟನೆಗಳಿಂದ ಸಾಥ್ ನೀಡಿದ್ದು,ಸ್ಥಳದಲ್ಲಿ ಪೊಲೀಸರು ಬೀಡು ಬಿಟ್ಟಿದಾರೆ.
 
ಇನ್ನು ಇದೆ ವೇಳೆ ಮಾತನಾಡಿದ  ಕುರುಬೂರ್ ಶಾಂತಕುಮಾರ್ ಇಂದಿಗೆ ಅಹೋ ರಾತ್ರಿ ಧರಣಿಗೆ 24 ದಿನಗಳಾಗಿವೆ.ಎಲ್ಲಾ ರೈತರಿಗೂ ಉಪ ಉತ್ಪನ್ನಗಳ ಮೇಲೆ ಲಾಭ ಸಿಗಬೇಕು.ಡಿಸೆಂಬರ್ 23 ರ ಒಳಗೆ ಭರವಸೆ ಈಡೇರಿಸದಿದ್ದರೆ 26 ರಂದು ಬೆಳಗಾವಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಾಗುವುದು.ಕಬ್ಬು ಬೆಳೆಗಾರರ ಹೋರಾಟದ ಒತ್ತಡಕ್ಕೆ ಸಕ್ಕರೆ ಸಚಿವಾಲಯ ಕಬ್ಬಿನ ತೂಕದಲ್ಲಿ ಮೋಸ ತಪ್ಪಿಸಲು ಕಾರ್ಖಾನೆಗಳ ಮೇಲೆ ದಾಳಿ ನಡೆಸಿರುವುದು ಸ್ವಾಗತಾರ್ಹ.ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು.ಡಿಸೆಂಬರ್ 23 ರಂದು ವಿಶ್ವ ರೈತರ ದಿನಾಚರಣೆ ಜೊತೆಗೆ ರಾಜ್ಯ ಮಟ್ಟದ ರೈತ ಸಮಾವೇಶ ಧಾರವಾಡದಲ್ಲಿ ನಡೆಸುತ್ತೇವೆ.ಸಮಾವೇಶದಲ್ಲಿ ಕೃಷಿ ಕಾಯಕಯೋಗಿಗಳನ್ನ ಗುರುತಿಸಿ, ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments