Suhas Shetty Case: ಮಾಧ್ಯಮಗಳಲ್ಲಿ ಫೋಸ್ಟ್ ಹಂಚಿದವರಿಗೆ ನಡುಕ ಶುರು, ಯಾಕೆ ಗೊತ್ತಾ

Sampriya
ಶನಿವಾರ, 3 ಮೇ 2025 (21:29 IST)
ಮಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ಪ್ರಕರಣ ಸಂಬಂಧ ತನಿಖೆ ಚುರುಕೊಂಡಿದ್ದು ಈಗಾಗಲೇ 7 ಮಂದಿಯನ್ನು ಬಂಧಿಸಲಾಗಿದೆ.

ಹತ್ಯೆಗೆ ಸೇಡು ತೀರಿಸಿಕೊಳ್ಳುವ ಅಥವಾ ಹತ್ಯೆಯನ್ನು ಸಂಭ್ರಮಾಚರಣೆ ಮಾಡುವ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ ಪೊಲೀಸರು 12 ಪ್ರಕರಣಗಳನ್ನು ದಾಖಲಿಸಿದ್ದಾರೆ.

ಮಂಗಳೂರು ಉತ್ತರ, ಮಂಗಳೂರು ದಕ್ಷಿಣ, ಮೂಲ್ಕಿ, ಉರ್ವ, ಬರ್ಕೆ, ಮೂಡಬಿದ್ರಿ ಮತ್ತು ಕಾವೂರುನಾದ್ಯಂತ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಥಮ ಮಾಹಿತಿ ವರದಿಗಳು (FIR) ದಾಖಲಾಗಿವೆ.

ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತಿತರ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾದ ಫೋಸ್ಟ್ ಗಳು ಕರಾವಳಿ ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆಯನ್ನು ಹೆಚ್ಚಿಸಿವೆ. ಹತ್ಯೆ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಕೆಲ ಪೋಸ್ಟ್‌ಗಳು ವೈರಲ್ ಆಯಿತು. ಕೆಲವು ಫೋಸ್ಟ್ ಗಳಲ್ಲಿ ಸುಹಾಸ್ ಶೆಟ್ಟಿಯ ತ್ಯಾಗ ವ್ಯರ್ಥವಾಗಲು ಬಿಡುವುದಿಲ್ಲ, ನಮ್ಮ ಶಕ್ತಿಯನ್ನು ತೋರಿಸದಿದ್ದರೆ ನಾವು ಬದುಕುವುದಿಲ್ಲ, ರಕ್ತಕ್ಕೆ ರಕ್ತವೇ ಉತ್ತರ ಎಂದು ಬರೆಯಲಾಗಿದೆ.

ಇನ್ನೊಂದು ಫೋಸ್ಟ್ ನಲ್ಲಿ Finished ಎಂಬ ಪದದೊಂದಿಗೆ ಸುಹಾಸ್ ಶೆಟ್ಟಿ ಫೋಟೋ ಹಾಕಲಾಗಿದೆ. ಶೀಘ್ರದಲ್ಲೇ ಮುಂದಿನ ವಿಕೆಟ್ ಬೀಳಲಿದೆ ಎಂದು ಫೋಸ್ಟ್ ಮಾಡಲಾಗಿದೆ.

<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments