Webdunia - Bharat's app for daily news and videos

Install App

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Krishnaveni K
ಭಾನುವಾರ, 8 ಜೂನ್ 2025 (20:26 IST)
ಮಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ನಡು ರಸ್ತೆಯಲ್ಲೇ ಕೊಲೆಗೀಡಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಪ್ರಕರಣವನ್ನು ಕೇಂದ್ರ ಎನ್ಐಎ ಹೆಗಲಿಗೆ ವಹಿಸಿದೆ. ಇದರೊಂದಿಗೆ ಕರಾವಳಿಯಲ್ಲಿ ನಡೆಯುತ್ತಿರುವ ಎಲ್ಲಾ ಸರಣಿ ಹತ್ಯಾಕಾಂಡಗಳ ರಹಸ್ಯ ಬಯಲಾಗಬಹುದು ಎನ್ನಲಾಗಿದೆ.

ಕರಾವಳಿ ನಗರಿ ಮಂಗಳೂರಿನಲ್ಲಿ ಹಿಂದೂ ಮತ್ತು ಮುಸ್ಲಿಮರ ಕೊಲೆಯಾಗುತ್ತಿದೆ. ಒಂದು ಕೊಲೆಗೆ ಪ್ರತೀಕಾರವಾಗಿ ಮತ್ತೊಂದು ಕೊಲೆ ಎಂಬ ಪರಿಸ್ಥಿತಿಯಾಗಿದೆ. ಸುಹಾಸ್ ಶೆಟ್ಟಿ ಕೊಲೆಗೆ ಪ್ರತೀಕಾರವಾಗಿ ಇತ್ತೀಚೆಗೆ ಅಬ್ದುಲ್ ರಹಿಮಾನ್ ಕೊಲೆಯಾಗಿತ್ತು. ಇದರ ಬೆನ್ನಲ್ಲೇ ಈಗ ಸುಹಾಸ್ ಶೆಟ್ಟಿ ಪ್ರಕರಣವನ್ನು ಎನ್ಐಎಗೆ ವಹಿಸಲಾಗಿದೆ.

ಮೇ 1 ರಂದು ರಾತ್ರಿ ಬಜ್ಪೆಯಲ್ಲಿ ಬಜರಂಗ ದಳದ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಅನ್ಯಕೋಮಿನ ಯುವಕರು ನಡು ರಸ್ತೆಯಲ್ಲೇ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಘಟನೆ ಬಳಿಕ ಕರಾವಳಿಯಲ್ಲಿ ಉದ್ವಿಗ್ನ ಪರಿಸ್ಥಿತಿಯಾಗಿತ್ತು.

ಈ ಪ್ರಕರಣವನ್ನು ಈಗ ರಾಷ್ಟ್ರೀಯ ತನಿಖಾ ದಳ ತನಿಖೆ ನಡೆಸಲಿದೆ. ಸುಹಾಸ್ ಶೆಟ್ಟಿ ಕೊಲೆಗೆ ಈ ಹಿಂದೆ ನಡೆದ ಕೊಲೆಗಳಿಗೂ ಲಿಂಕ್ ಇದೆ. ಹೀಗಾಗಿ ಹಿಂದಿನ ಹಲವು ಪ್ರಕರಣಗಳೂ ಈ ತನಿಖೆಯೊಂದಿಗೆ ಬಯಲಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

ಮುಂದಿನ ಸುದ್ದಿ
Show comments