Webdunia - Bharat's app for daily news and videos

Install App

ಸೂಸೈಡಿಗೆ ಯತ್ನ , ಪಟಾಕಿ ಸಿಡಿಸಿ ಅವಾಂತರ

geetha
ಶನಿವಾರ, 27 ಜನವರಿ 2024 (19:10 IST)
ಬೆಂಗಳೂರು : ಮಾಣಿಕ್‌ ಶಾ ಪೆರೇಡ್‌ ಗ್ರೌಂಡಿನಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭದ್ರತಾ ಉಲ್ಲಂಘನೆಯ ಆರೋಪಿ ಪರಶುರಾಮ ಕುರಿತು ಇನ್ನಷ್ಟು ಮಾಹಿತಿಗಳು ಹೊರಬಿದ್ದಿವೆ. ಈತ ಈ ಮುನ್ನವೇ ಒಂದು ಬಾರಿ ಸಿಎಂ ಸಿದ್ದರಾಮಯ್ಯ ಎದುರು ಆತ್ಮಹತ್ಯೆಗೆ ಯತ್ನಿಸಿದ್ದಷ್ಟೇ ಅಲ್ಲದೇ, ಕಂಠೀರವ ಕ್ರೀಡಾಂಗಣದಲ್ಲಿ ಸರ್ಕಾರಿ ಕಾರ್ಯಕ್ರಮ ನಡೆಸುತ್ತಿದ್ದ ವೇಳೆ ಪಟಾಕಿ ಸಿಡಿಸಿ ಅವಾಂತರ ಸೃಷ್ಟಿಸಿದ್ದರು ಎಂದು ತಿಳಿದುಬಂದಿದೆ.

ಅಂದು ಕೆಪಿಎಸ್‌ಸಿ ಪರೀಕ್ಷೆಯ ಫಲಿತಾಂಶವನ್ನು ಸರ್ಕಾರ ತಡೆಹಿಡಿದಿತ್ತು. ಹೀಗಾಗಿ ಪರಶುರಾಮ್‌ ಭವಿಷ್ಯ ಡೋಲಾಯಮಾನವಾಗಿತ್ತು. ಅಂದು ಸರ್ಕಾರ ಫಲಿತಾಂಶ ಹೊರಬಿಟ್ಟಿದ್ದರೆ ನಾನೂ ಸಹ ಕೆಪಿಎಸ್‌ಸಿ ಅಧಿಕಾರಿಯಾಗಿರುತ್ತಿದ್ದೆ ಎಂಬ ವಿಚಿತ್ರ ತರ್ಕದ ಮೇಲೆ ಪರಶುರಾಮ್‌ ಸರ್ಕಾರದ ವಿರುದ್ದ ದ್ವೇಷ ಹೊಂದಿದ್ದರು. 
 
ಇದೇ ವಿಷಯಕ್ಕೆ ಹಲವು ಬಾರಿ ಸರ್ಕಾರಿ ಕಚೇರಿ ಅಲೆದಾಡಿ ಬೇಸತ್ತಿದ್ದ ಪರಶುರಾಮ್‌, 16-02-2017 ರಂದು ಜ್ಞಾನಜ್ಯೋತಿ ಆಡಿಟೋರಿಯಂನಲ್ಲಿ ನಡೆಯುತ್ತಿದ್ದ ಸರ್ಕಾರಿ ಕಾರ್ಯಕ್ರಮಕ್ಕೆ ನುಗ್ಗಿ ಸಿಎಂ ಸಿದ್ದರಾಮಯ್ಯ ಎದುರಿಗೇ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಮತ್ತೊಮ್ಮೆ ಕಂಠೀರವ ಕ್ರೀಡಾಂಗಣದಲ್ಲಿ ಸರ್ಕಾರಿ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಪಟಾಕಿ ಸಿಡಿಸಿ ಆತಂಕ ಸೃಷ್ಟಿಸಿದ್ದರೆಂದು ತಿಳಿದುಬಂದಿದೆ. ಶುಕ್ರವಾರವೂ ಸಹ ಪಾಕ್ಷಿಕ ಪತ್ರಿಕೆಯೊಂದರ ಹೆಸರಿನಲ್ಲಿ ಪಾಸ್‌ ಪಡೆದುಕೊಂಡಿದ್ದ ಪರಶುರಾಮ್‌ ಮೈಸೂರಿನಿಂದ ರೈಲಿನಲ್ಲಿ ಬಂದು ಸಿಎಂ ಗಮನ ಸೆಳೆಯಲು  ಈ ರೀತಿಯ ಕೃತ್ಯ ಎಸೆಗಿದ್ದರಾರೆಂದು ತಿಳಿದುಬಂದಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments