Daily Horoscope

ಸೂಸೈಡಿಗೆ ಯತ್ನ , ಪಟಾಕಿ ಸಿಡಿಸಿ ಅವಾಂತರ

geetha
ಶನಿವಾರ, 27 ಜನವರಿ 2024 (19:10 IST)
ಬೆಂಗಳೂರು : ಮಾಣಿಕ್‌ ಶಾ ಪೆರೇಡ್‌ ಗ್ರೌಂಡಿನಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭದ್ರತಾ ಉಲ್ಲಂಘನೆಯ ಆರೋಪಿ ಪರಶುರಾಮ ಕುರಿತು ಇನ್ನಷ್ಟು ಮಾಹಿತಿಗಳು ಹೊರಬಿದ್ದಿವೆ. ಈತ ಈ ಮುನ್ನವೇ ಒಂದು ಬಾರಿ ಸಿಎಂ ಸಿದ್ದರಾಮಯ್ಯ ಎದುರು ಆತ್ಮಹತ್ಯೆಗೆ ಯತ್ನಿಸಿದ್ದಷ್ಟೇ ಅಲ್ಲದೇ, ಕಂಠೀರವ ಕ್ರೀಡಾಂಗಣದಲ್ಲಿ ಸರ್ಕಾರಿ ಕಾರ್ಯಕ್ರಮ ನಡೆಸುತ್ತಿದ್ದ ವೇಳೆ ಪಟಾಕಿ ಸಿಡಿಸಿ ಅವಾಂತರ ಸೃಷ್ಟಿಸಿದ್ದರು ಎಂದು ತಿಳಿದುಬಂದಿದೆ.

ಅಂದು ಕೆಪಿಎಸ್‌ಸಿ ಪರೀಕ್ಷೆಯ ಫಲಿತಾಂಶವನ್ನು ಸರ್ಕಾರ ತಡೆಹಿಡಿದಿತ್ತು. ಹೀಗಾಗಿ ಪರಶುರಾಮ್‌ ಭವಿಷ್ಯ ಡೋಲಾಯಮಾನವಾಗಿತ್ತು. ಅಂದು ಸರ್ಕಾರ ಫಲಿತಾಂಶ ಹೊರಬಿಟ್ಟಿದ್ದರೆ ನಾನೂ ಸಹ ಕೆಪಿಎಸ್‌ಸಿ ಅಧಿಕಾರಿಯಾಗಿರುತ್ತಿದ್ದೆ ಎಂಬ ವಿಚಿತ್ರ ತರ್ಕದ ಮೇಲೆ ಪರಶುರಾಮ್‌ ಸರ್ಕಾರದ ವಿರುದ್ದ ದ್ವೇಷ ಹೊಂದಿದ್ದರು. 
 
ಇದೇ ವಿಷಯಕ್ಕೆ ಹಲವು ಬಾರಿ ಸರ್ಕಾರಿ ಕಚೇರಿ ಅಲೆದಾಡಿ ಬೇಸತ್ತಿದ್ದ ಪರಶುರಾಮ್‌, 16-02-2017 ರಂದು ಜ್ಞಾನಜ್ಯೋತಿ ಆಡಿಟೋರಿಯಂನಲ್ಲಿ ನಡೆಯುತ್ತಿದ್ದ ಸರ್ಕಾರಿ ಕಾರ್ಯಕ್ರಮಕ್ಕೆ ನುಗ್ಗಿ ಸಿಎಂ ಸಿದ್ದರಾಮಯ್ಯ ಎದುರಿಗೇ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಮತ್ತೊಮ್ಮೆ ಕಂಠೀರವ ಕ್ರೀಡಾಂಗಣದಲ್ಲಿ ಸರ್ಕಾರಿ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಪಟಾಕಿ ಸಿಡಿಸಿ ಆತಂಕ ಸೃಷ್ಟಿಸಿದ್ದರೆಂದು ತಿಳಿದುಬಂದಿದೆ. ಶುಕ್ರವಾರವೂ ಸಹ ಪಾಕ್ಷಿಕ ಪತ್ರಿಕೆಯೊಂದರ ಹೆಸರಿನಲ್ಲಿ ಪಾಸ್‌ ಪಡೆದುಕೊಂಡಿದ್ದ ಪರಶುರಾಮ್‌ ಮೈಸೂರಿನಿಂದ ರೈಲಿನಲ್ಲಿ ಬಂದು ಸಿಎಂ ಗಮನ ಸೆಳೆಯಲು  ಈ ರೀತಿಯ ಕೃತ್ಯ ಎಸೆಗಿದ್ದರಾರೆಂದು ತಿಳಿದುಬಂದಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments