Webdunia - Bharat's app for daily news and videos

Install App

ಹೆಂಡತಿ ಬರಲಿಲ್ಲ ಎಂದು ಬೇಸತ್ತು ಆತ್ಮಹತ್ಯೆ ಯತ್ನ

Webdunia
ಶನಿವಾರ, 30 ಮೇ 2015 (16:33 IST)
ಮನೆ ಬಿಟ್ಟು ಹೋದ ಪತ್ನಿ ಮರಳಿ ಮನೆಗೆ ಬಾರದ ಕಾರಣ ಮನನೊಂದ ವ್ಯಕ್ತಿಯೋರ್ವ ತನ್ನ ಮಕ್ಕಳಿಗೂ ವಿಷ ಉಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದಲ್ಲಿ ನಡೆದಿದೆ. 
 
ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಕೊಲ್ಲೂರು ಸ್ವಾಮಿ ಎಂದು ಹೇಳಲಾಗಿದ್ದು, ಈತ ತನ್ನ ಮೂವರೂ ಮಕ್ಕಳಿಗೆ ವಿಷ ಉಣಿಸಿ ಆತ್ಮಹತ್ಯೆಗೆ ಯತ್ನಿಸಿದವನಾಗಿದ್ದಾನೆ. ಇನ್ನು ತಂದೆಯೂ ಸೇರಿ ನಾಲ್ವರೂ ಕೂಡ ತೀವ್ರವಾಗಿ ಅಸ್ವಸ್ಥರಾಗಿದ್ದರು. ಅಲ್ಲದೆ ಸಾವು ಬದುಕಿನ ನಡುವೆ ಹೋರಾಡುತ್ತಿದ್ದರು ಎನ್ನಲಾಗಿದ್ದು, ಇಧನ್ನು ಕಂಡ ನಗರದಲ್ಲಿನ ಸ್ಥಳೀಯರು ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಪರಿಣಾಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 
 
ಪ್ರಕರಣದ ಹಿನ್ನೆಲೆ: ಪತಿ ಕೊಲ್ಲೂರು ಸ್ವಾಮಿ ಹಾಗೂ ಆತ ಪತ್ನಿ ದುರ್ಗಮ್ಮ ಅವರ ನಡುವೆ ಪ್ರತಿನಿತ್ಯ ಜಗಳವಾಗುತ್ತಿತ್ತು. ಇದಕ್ಕೆ ಕಾರಣ ಪತಿ ಕುಡಿತದ ದಾಸನಾಗಿದ್ದ. ಈ ಹಿನ್ನೆಲೆಯಲ್ಲಿ ದಿನನಿತ್ಯದ ಜಗಳದಿಂದ ಬೇಸತ್ತಿದ್ದ ಪತ್ನಿ ಕಲೆದ ವಾರದ ಹಿಂದೆ ಮನೆ ತೊರೆದಿದ್ದಳು. ಆದರೆ ದುರ್ಗಮ್ಮ ದೊರಕಿರಲಿಲ್ಲ. ಇದರಿಂದ ಬೇಸತ್ತ ಪತಿ ತನ್ನ ಮೂವರೂ ಮಕ್ಕಳಿಗೆ ವಿಷ ಪ್ರಾಸನ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗಿದೆ. 
 
ಇನ್ನು ನಗರದ ಎಪಿಎಂಸಿ ಠಾಣೆಯಲ್ಲಿ ಪ್ರಕಱಣ ದಾಖಲಾಗಿದ್ದು, ಪೊಲೀಸರು ಮಹಿಳೆಗಾಗಿ ಶೋಧನಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments