Webdunia - Bharat's app for daily news and videos

Install App

ವಿಧಾನಸೌಧದಲ್ಲಿಯೇ ವ್ಯಕ್ತಿಯ ಆತ್ಮಹತ್ಯೆ ಯತ್ನ?

Webdunia
ಸೋಮವಾರ, 24 ಜೂನ್ 2019 (15:51 IST)
ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಬಾತರೂಮ್‌ನಲ್ಲಿ 44 ವರ್ಷದ ವ್ಯಕ್ತಿಯೊಬ್ಬ ಕೈಮಣಿಕಟ್ಟು ಮತ್ತು ಗಂಟಲು ಕತ್ತರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ.
ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಚಿಕ್ಕಬಳ್ಳಾಪುರ ಮೂಲದ ಆರ್.ರೇವಣ್ಣ ಕುಮಾರ್ ಎಂದು ಗುರುತಿಸಲಾಗಿದೆ. ಆತನನ್ನು ಬೌರಿಂಗ್ ಆಂಡ್ ಲೇಡಿ ಕರ್ಜನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ
 
ರೇವಣ್ಣ ಕುಮಾರ್ ವಿಧಾನಸೌಧಕ್ಕೆ ಬಂದಾಗ ಪೇಪರ್‌ಗಳ ಬಂಡಲ್‌ಗಳನ್ನು ತೆಗೆದುಕೊಂಡು ಬಂದಿದ್ದು, ಆತ ಆತ್ಮಹತ್ಯೆ ಮಾಡಿಕೊಂಡಾಗ ಪಕ್ಕದಲ್ಲಿಯೇ  ಉದ್ಯೋಗಕ್ಕೆ ಸಂಬಂಧಿಸಿದಂತೆ ಪೇಪರ್‌‌ಗಳ ಬಂಡಲ್‌ಗಳು ದೊರಕಿವೆ ಎಂದು ಪೊಲೀಸರು ತಿಳಿಸಿದ್ದಾರೆ.
 
ಚಿಕ್ಕಬಳ್ಳಾಪುರದಲ್ಲಿ ಗ್ರಂಥಪಾಲಕನಾಗಿ ಸೇವೆ ಸಲ್ಲಿಸುತ್ತಿರುವ ರೇವಣ್ಣ ಕುಮಾರ್, ಇಂದು ಮಧ್ಯಾಹ್ನ 1 ರಿಂದ 1.30 ಗಂಟೆಗೆ ವಿಧಾನಸೌಧಕ್ಕೆ ಬಂದಿದ್ದಾನೆ. ಆತನ ಬಳಿ ಉದ್ಯೋಗಕ್ಕೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿವೆ ಎಂದು ಡಿಸಿಪಿ ಬೆಂಗಳೂರು ಸೆಂಟ್ರಲ್ ಡಿ.ದೇವರಾಜಾ ತಿಳಿಸಿದ್ದಾರೆ.
 
ಕೈ ಮಣಿಕಟ್ಟು ಮತ್ತು ಗಂಟಲನ್ನು ಹರಿತವಾದ ಬ್ಲೇಡ್, ಚಾಕು ಅಥವಾ ಚೂಪಾದ ವಸ್ತುವಿನಿಂದ ಕತ್ತರಿಸಿಕೊಂಡಿರುವ ಸಾಧ್ಯತೆಗಳಿವೆ. ಯಾವ ಕಾರಣಕ್ಕೆ ವಿಧಾನಸೌಧಕ್ಕೆ ಬಂದರು ಅಥವಾ ಯಾರನ್ನು ಭೇಟಿಯಾಗಲು ಬಂದರು ಎನ್ನುವ ಬಗ್ಗೆ ಮಾಹಿತಿಯಿಲ್ಲ. ಆದರೆ, ರೇವಣ್ಣ ಕುಮಾರ್ ಪ್ರಾಣ ಅಪಾಯದಿಂದ ಪಾರಾಗಿದ್ದಾರೆ ಎಂದು ಡಿಸಿಪಿ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments