Webdunia - Bharat's app for daily news and videos

Install App

ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಮತ್ತೊಂದು ಆತ್ಮಹತ್ಯೆ

Webdunia
ಶುಕ್ರವಾರ, 2 ಸೆಪ್ಟಂಬರ್ 2022 (16:25 IST)
ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ(FTII)ಯಲ್ಲಿ ಮತ್ತೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದು, ತಿಂಗಳೊಳಗೆ ನಡೆದ ಎರಡನೇ ಆತ್ಮಹತ್ಯೆ ಪ್ರಕರಣ ಇದಾಗಿದೆ. ಆಕ್ಟಿಂಗ್‌ ವಿಷಯದಲ್ಲಿ ಮೂರನೇ ವರ್ಷದ ಪಿಜಿ ಡಿಪ್ಲೋಮಾ ಮಾಡುತ್ತಿದ್ದ 25 ವರ್ಷದ ಯುವತಿ ಕಾಮಾಕ್ಷಿ ಬೊಹರಾ(Kamakshi Bohara) ಆತ್ಮಹತ್ಯೆ ಮಾಡಿಕೊಂಡ ಯುವತಿ.
ನೈನಿತಲ್ (Nainital) ನಿವಾಸಿಯಾಗಿದ್ದಳು. ಈ ಹಿಂದೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಂತೆಯೇ ಈಕೆಯೂ ಕೂಡ ಒಂಟಿ ಆಗಿದ್ದಳು ಎಂದು ವರದಿಗಳು ತಿಳಿಸಿವೆ. ಗುರುವಾರ ರಾತ್ರಿ ತನ್ನ ಹಾಸ್ಟೆಲ್ ಕೊಠಡಿಯ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಈಕೆಯ ಶವ ಪತ್ತೆಯಾಗಿದೆ.
 
ಗುರುವಾರ ಬೆಳಗ್ಗೆಯೇ ಈಕೆ ತನ್ನ ಬೆಡ್‌ಶೀಟ್‌ನ್ನು ಬಳಸಿ ನೇಣಿಗೆ ಶರಣಾಗಿದ್ದಾಳೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಅಲ್ಲಿ ಯಾವುದೇ ಡೆತ್‌ನೋಟ್ ಲಭ್ಯವಾಗಿಲ್ಲ. ಕೆಲ ಮಾಹಿತಿಗಳ ಪ್ರಕಾರ ಬೊಹರಾ ಅವರು ಪ್ರತಿದಿನ ಕಾಲೇಜಿನಲ್ಲಿ ಉಪನ್ಯಾಸಕರನ್ನು ಭೇಟಿಯಾಗುತ್ತಿದ್ದಳು. ಆದರೆ ಅಂದು ಬಾರದೆ ಇದ್ದು, ದೂರವಾಣಿ ಕರೆಯನ್ನು ಸ್ವೀಕರಿಸದೇ ಇದ್ದ ಹಿನ್ನೆಲೆಯಲ್ಲಿ ಉಪನ್ಯಾಸಕರು ಆಕೆ ಇದ್ದ ಹಾಸ್ಟೆಲ್‌ಗೆ ಕೆಲ ವಿದ್ಯಾರ್ಥಿಗಳನ್ನು ಕಳಿಸಿ ನೋಡಿ ಬರುವಂತೆ ತಿಳಿಸಿದ್ದರು. ಯಾರೊಂದಿಗೂ ಬೆರೆಯದೇ ಸದಾ ಒಬ್ಬಂಟಿಯಾಗಿದ್ದ ವಿದ್ಯಾರ್ಥಿನಿ ಕಾಮಾಕ್ಷಿ ಬೊಹರಾಳ ಗುಣ ತಿಳಿದಿದ್ದ, ಉಪನ್ಯಾಸಕರು ವಿದ್ಯಾರ್ಥಿಗಳನ್ನು ಕಳಿಸಿದ್ದರು. ವಿದ್ಯಾರ್ಥಿಗಳು ಹಾಸ್ಟೆಲ್‌ಗೆ ತೆರಳಿ ಆಕೆಯ ರೂಮ್‌ ಬಳಿ ಹೋದಾಗ ಬಾಗಿಲು ಹಾಕಿತ್ತು. ಬಾಗಿಲು ಬಡಿದರು ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಾರದೇ ಇದ್ದಾಗ ಅವರು ಭದ್ರತಾ ಸಿಬ್ಬಂದಿಯನ್ನು ಕರೆದಿದ್ದಾರೆ. ನಂತರ ಅವರು ಬಂದು ಬಾಗಿಲು ಮುರಿದು ನೋಡಿದಾಗ ಮೃತದೇಹ ಫ್ಯಾನ್‌ಗೆ ನೇತು ಹಾಕಿಕೊಂಡಿರುವುದು ಕಂಡು ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಮುಂದಿನ ಸುದ್ದಿ
Show comments