Publish Date: Sat, 05 Mar 2022 (11:52 IST)
Updated Date: Sat, 05 Mar 2022 (14:11 IST)
ಬೆಂಗಳೂರು : ಡಿಬಾರ್ ಮಾಡಿದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ಭವ್ಯ(21) ಎಂದು ಗುರುತಿಸಲಾಗಿದೆ. ಕೋರಮಂಗಲದ ಖಾಸಗಿ ಕಾಲೇಜಿನಲ್ಲಿ ಭವ್ಯ ಮೊದಲ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದರು. ಆದರೆ ನಿನ್ನೆ ನಡೆದ ಎಕ್ಸಾಂನಲ್ಲಿ ಕಾಪಿ ಮಾಡುತ್ತಿದ್ದಾಳೆಂದು ಆರೋಪಿಸಿ ಡಿಬಾರ್ ಮಾಡಿದ್ದರು.
ಇನ್ನೂ ಈ ವಿಚಾರವನ್ನು ಭವ್ಯ ಸೋದರಿ ದಿವ್ಯಾಗೆ ಕರೆ ಮಾಡಿ ನನ್ನನ್ನು ಡಿಬಾರ್ ಮಾಡಿದ್ದಾರೆ ಹಾಗಾಗಿ ನಾನು ಬದುಕುವುದಿಲ್ಲ ಎಂದು ನೋವು ಹಂಚಿಕೊಂಡಿದ್ದರು.
ಇದರಿಂದಾಗಿ ಗಾಬರಿಗೊಂಡ ದಿವ್ಯಾ ಕೂಡಲೇ ಭವ್ಯ ಅವರ ತಂದೆಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಆದರೆ ಅಷ್ಟೋತ್ತಿಗೆ ಭವ್ಯ ಮೃತಪಟ್ಟಿದ್ದಾರೆ. ಇದೀಗ ಈ ಸಂಬಂಧ ಜೀವನ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.