Webdunia - Bharat's app for daily news and videos

Install App

ರಾಜ್ಯದಲ್ಲಿ ರೈತರ ಆತ್ಮಹತ್ಯೆ ಗಣನೀಯ ಹೆಚ್ಚಳ..!

Webdunia
ಬುಧವಾರ, 2 ಮಾರ್ಚ್ 2022 (20:59 IST)
ದೇಶಾದ್ಯಂತ ರಾಜಕೀಯ ಪಕ್ಷಗಳು, ರೈತರ ಆದಾಯ ದ್ವಿಗುಣಗೊಳಿಸುವ ಭರವಸೆಗಳನ್ನು ನೀಡುತ್ತಿದ್ದಾರೆ. ಆದರೆ ತಳಮಟ್ಟಲ್ಲಿ ಮಾತ್ರ ಇನ್ನೂ ಪರಿಸ್ಥಿತಿ ಗಂಭೀರವಾಗಿಯೇ ಇದೆ. ಉದಾಹರಣೆಗೆ ಕರ್ನಾಟಕವನ್ನು ತೆಗೆದುಕೊಂಡರೆ 2015-16ರಿಂದೀಚೆಗೆ ರಾಜ್ಯದಲ್ಲಿ 7463 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. 2010-2015ರ ಅವಧಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಸಂಖ್ಯೆ (744)ಗೆ ಹೋಲಿಸಿದರೆ ಇದು ಹತ್ತು ಪಟ್ಟು ಅಧಿಕ ಎಂದು "ಟೈಮ್ಸ್ ಆಫ್ ಇಂಡಿಯಾ" ವರದಿ ಮಾಡಿದೆ.
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪರಿಸ್ಥಿತಿ ಉಲ್ಬಣಿಸಿದ್ದು ಕರ್ನಾಟಕದಲ್ಲಿ ಸಾವಿರಾರು ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಇಷ್ಟು ಸಾಲದೆಂಬಂತೆ ಕರ್ನಾಟಕ ಸರ್ಕಾರ ಮೃತರ ಕುಟುಂಬಗಳಿಗೆ ನ್ಯಾಯಸಮ್ಮತ ಪರಿಹಾರವನ್ನು ವಿತರಿಸುವಲ್ಲಿ ಕೂಡಾ ವಿಫಲವಾಗಿರುವುದು ಅಂಕಿ ಅಂಶಗಳಿಂದ ತಿಳಿದು ಬರುತ್ತದೆ. 2010-11ರಿಂದೀಚೆಗೆ 8207 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರೆ, ಪರಿಹಾರ ಸಿಕ್ಕಿರುವುದು 5756 ರೈತರ ಕುಟುಂಬಗಳಿಗೆ ಮಾತ್ರ.
ಸಂತ್ರಸ್ತ ಕುಟುಂಬಗಳ ಸಂಬಂಧಿಕರು ಸಲ್ಲಿಸಿದ ಅರ್ಜಿಗಳನ್ನು ಸರ್ಕಾರ ವಿವಿಧ ಕಾರಣಗಳಿಂದ ತಿರಸ್ಕರಿಸಿದೆ. ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬ 5 ಲಕ್ಷ ರೂಪಾಯಿ ಪರಹಾರ ಪಡೆಯಲು ಅರ್ಹವಾಗಿರುತ್ತದೆ.
ರೈತರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಭೀಮನಗೌಡ ಜಿ.ಪರಗೊಂಡ ಅವರು ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದ ಮಾಹಿತಿಯಿಂದ ಈ ಅಂಶ ಬಹಿರಂಗವಾಗಿದೆ. ನಿರಂತರ ಬರ ಪರಿಸ್ಥಿತಿ, ಪ್ರವಾಹ ಪರಿಸ್ಥಿತಿ ರೈತರ ಪಾಲಿಗೆ ಮಾರಕವಾಗಿ ಪರಿಣಮಿಸಿದೆ. ಹಲವು ಮಂದಿ ರೈತರು ಮಾರುಕಟ್ಟೆಯಲ್ಲಿ ಬೆಲೆ ವ್ಯತ್ಯಯದಿಂದ ಹತಾಶೆಗೊಂಡು ನಿರೀಕ್ಷಿತ ಬೆಲೆ ಸಿಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದರ ಜತೆಗೆ 2000ಕ್ಕೂ ಹೆಚ್ಚು ಮೃತ ರೈತರ ಕುಟುಂಬಗಳಿಗೆ ಪರಿಹಾರ ನಿರಾಕರಿಸಲಾಗಿದೆ. 407 ಮೃತ ರೈತರ ಕ್ಲೇಮ್‌ಗಳಿಗೆ ಸರ್ಕಾರದ ಅನುಮೋದನೆ ದೊರಕಿದ್ದರೂ ಈ ಕುಟುಂಬಗಳಿಗೆ ಸರ್ಕಾರ ಇನ್ನೂ ಪರಿಹಾರ ವಿತರಿಸಬೇಕಿದೆ. ಕೆಲ ರೈತರ ಆತ್ಮಹತ್ಯೆ ಕೃಷಿ ಸಂಬಂಧಿತ ಕಾರಣಗಳಿಗೆ ಅಲ್ಲ. ಆದ್ದರಿಂದ ಅವರ ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದು ಕೃಷಿ ಇಲಾಖೆಯ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.
ಆದರೆ ಮೃತ ರೈತರ ಕುಟುಂಬಗಳಿಗೆ ನೀಡುವ ಪರಿಹಾರವನ್ನು ಸರ್ಕಾರ 5 ಲಕ್ಷ ರೂಪಾಯಿಗೆ ಹೆಚ್ಚಿಸಿರುವುದರಿಂದ ಅಧಿಕಾರಿಗಳು ಮನವಿ ತಿರಸ್ಕರಿಸಲು ಹಲವು ನೆಪಗಳನ್ನು ಹುಡುಕುತ್ತಾರೆ ಎನ್ನುವುದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ ಅವರ ಆರೋಪ. ಸಂಘ ಹಲವು ಕುಟುಂಬಗಳಿಗೆ ಪರಿಹಾರ ಪಡೆಯಲು ನೆರವಾಗಿದೆ ಎಂದು ಅವರು ಹೇಳುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments