Select Your Language

Notifications

webdunia
webdunia
webdunia
webdunia

ಪೊಲೀಸಪ್ಪನ ಅವತಾರ ನೋಡಿ ಸಸ್ಪೆಂಡ್ ಮಾಡಿದ ಜಿಲ್ಲಾ ಪೊಲೀಸ್ ಅಧೀಕ್ಷಕರು

ಪೊಲೀಸಪ್ಪನ ಅವತಾರ ನೋಡಿ ಸಸ್ಪೆಂಡ್ ಮಾಡಿದ ಜಿಲ್ಲಾ ಪೊಲೀಸ್ ಅಧೀಕ್ಷಕರು
ಬೆಂಗಳೂರು , ಗುರುವಾರ, 28 ಜುಲೈ 2022 (17:35 IST)

ಮದ್ದೂರು ಪಟ್ಟಣದ ಪೋಲೀಸ್ ಠಾಣೆಗೆ ಮಂಗಳವಾರ ದಕ್ಷಿಣ ವಲಯ ಐಜಿಪಿ ಪ್ರವೀಣ್ ಮಧುಕರ್ ಪವಾರ್ ಭೇಟಿ ನೀಡಿದ್ದರು. ಠಾಣೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮದ್ದೂರು ಪೋಲೀಸ್ ಠಾಣೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಯೋಗ ಕ್ಷೇಮವನ್ನು ವಿಚಾರಿಸಿ, ಯಾವುದಾದರೂ ಸಮಸ್ಯೆಗಳಿದ್ದರೆ ತಮ್ಮ ಬಳಿ ಮುಕ್ತವಾಗಿ ಚರ್ಚಿಸಬಹುದು ಎಂದು ಐಜಿಪಿ ಪ್ರವೀಣ್ ಮಧುಕರ್ ಪವಾರ್ ಮನವಿ ಮಾಡಿದರು.

ಪ್ರತಿಯೊಬ್ಬ ಸಿಬ್ಬಂದಿಗಳ ಸಮಸ್ಯೆಗಳನ್ನು ಸ್ವತಃ ತಾವೇ ಖುದ್ದಾಗಿ ವಿಚಾರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಮದ್ದೂರು ಸಂಚಾರಿ ಪೊಲೀಸ್ ಠಾಣೆಯ ಪೇದೆ ಕೃಷ್ಣಮೂರ್ತಿ (489) ಅವರು ಸಮವಸ್ತ್ರ ಧರಿಸುವಲ್ಲಿ ಅಶಿಸ್ತಿನಿಂದ ವರ್ತಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಪೋಲಿಸ್ ಅಧೀಕ್ಷಕ ಎನ್.ಯತೀಶ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಪೊಲೀಸರ ಲಾಠಿ ಚಾರ್ಜ್ ಗೂ ಜಗ್ಗದ ಹಿಂದೂ ಕಾರ್ಯಕರ್ತರು ...!!