Publish Date: Tue, 07 Oct 2025 (13:13 IST)
Updated Date: Tue, 07 Oct 2025 (13:16 IST)
ಬೆಂಗಳೂರು: ಅನನ್ಯಾ ಭಟ್ ನಾಪತ್ತೆ ಪ್ರಕರಣ ಸಂಬಂದ ಮಂಜುನಾಥ ಸ್ವಾಮಿ ಬಳಿ ಕ್ಷಮೆ ಕೇಳುತ್ತೇನೆ. ಅದಲ್ಲದೆ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಕ್ಷಮೆಯಾಚಿಸುತ್ತೇನೆಂದು ಸುಜಾತಾ ಭಟ್ ಅವರು ಮಾಧ್ಯಮವೊಂದಕ್ಕೆ ಪ್ರತಿಕ್ರಿತಿಸಿದ್ದಾರೆ.
ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಬುರುಡೆ ಗ್ಯಾಂಗ್ ಜೊತೆ ಹೋಗಿ ನಾನು ತಪ್ಪು ಮಾಡಿದ್ದೇನೆ. ಆ ವಿಚಾರದಲ್ಲಿ ಈಗಾಲೂ ನನಗೆ ಪಶ್ಚಾತ್ತಾಪವಿದೆ. ಹಾಗಾಗಿ ನಾನು ಧರ್ಮಸ್ಥಳಕ್ಕೆ ಹೋಗಿಯೇ ಕ್ಷಮೆಯನ್ನು ಕೇಳುತ್ತೇನೆ ಎಂದರು.
ವಸಂತಿ ಪ್ರಕರಣದಲ್ಲಿ ನಟನ ಸಹೋದರ ಇರುವುದು ನಿಜ. ವಾಸಂತಿ ಮಿಸ್ಸಿಂಗ್ ಕೇಸಲ್ಲಿ ನಟನ ಸಹೋದರ ಎ2 ಆರೋಪಿ. ವಾರದ ಬಳಿಕ ಕೊಳೆತ ಸ್ಥಿತಿಯಲ್ಲಿ ವಾಸಂತಿ ಶವ ಪತ್ತೆಯಾಗಿದೆ ಎಂಬ ಸುದ್ದಿ ಹರಿದಾಡಿತ್ತು. ವಾಸಂತಿ ಹಾಗೂ ಸ್ಟಾರ್ ನಟನ ಸಹೋದರನ ನಡುವಿನ ಸಂಬಂಧ ಏನೆಂಬುದು ಎಂದರು.