Webdunia - Bharat's app for daily news and videos

Install App

ಮಂಡ್ಯದಲ್ಲಿ ಹಾವಳಿ ಎಬ್ಬಿಸಿದ್ದ ಸಕಲೇಶಪುರದ ಪುಂಡಾನೆ: ರೋಚಕ ಆಪರೇಷನ್ ಮೂಲಕ ಕೊನೆಗೂ ಸೆರೆ

ಕುಶಾಲನಗರದ ದುಬಾರೆ ಕ್ಯಾಂಪ್ನಿಂದ ಕರೆಸಿದ್ದ ಅಭಿಮನ್ಯು, ಭೀಮ, ಗಣೇಶ ಹಾಗೂ ಗೋಪಾಲಸ್ವಾಮಿ ಆನೆಗಳು ಸಹಾಯದೊಂದಿಗೆ ಆಪರೇಷನ್ ಮೌಂಟೇನ್ ಟಸ್ಕರ್ ಸಕ್ಸಸ್ ಆಗಿದೆ.

Webdunia
ಬುಧವಾರ, 30 ಜೂನ್ 2021 (07:48 IST)
ಮಂಡ್ಯ: ಬರೋಬ್ಬರಿ 48 ಗಂಟೆಗಳು, ಸುಮಾರು ನಲವತ್ತು ಅಧಿಕಾರಿ ಮತ್ತು ಸಿಬ್ಬಂದಿಯ ಪರಿಶ್ರಮದ ಫಲವಾಗಿ ಮಳವಳ್ಳಿ ಹಾಗೂ ಮದ್ದೂರು ತಾಲೂಕಿನ ಜನರಲ್ಲಿ ಆತಂಕ ಸೃಷ್ಟಿಸಿದ್ದ ಪುಂಡಾನೆಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ.



 ಮದ್ದೂರು ತಾಲ್ಲೂಕಿನ ಗ್ರಾಮಗಳಾದ ಬೆಳ್ಳೂರು, ಬನ್ನಹಳ್ಳಿ ಹಾಗೂ ಕೂಳಗೆರೆ ಗ್ರಾಮಗಳಲ್ಲಿ ಕಾಡನೆಗಳು ರೈತರ ಜಮೀನಿಗೆ ಲಗ್ಗೆ ಇಟ್ಟು ಕಬ್ಬು, ತಂಗು, ರೇಷ್ಮೆ ಬೆಳಗಳನ್ನ ತುಳಿದು ನಾಶ ಮಾಡಿದ್ದವು. ಹೀಗಾಗಿ ರೈತರು ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದರು.
 
ಕುಶಾಲನಗರದ ದುಬಾರೆ ಕ್ಯಾಂಪ್ನಿಂದ ಕರೆಸಿದ್ದ ಅಭಿಮನ್ಯು, ಭೀಮ, ಗಣೇಶ ಹಾಗೂ ಗೋಪಾಲಸ್ವಾಮಿ ಆನೆಗಳು ಸಹಾಯದೊಂದಿಗೆ ಆಪರೇಷನ್ ಮೌಂಟೇನ್ ಟಸ್ಕರ್ ಸಕ್ಸಸ್ ಆಗಿದೆ. ಮೌಂಟೇನ್ ಟಸ್ಕರ್-3945 ಹೆಸರಿನ  ಪುಂಡಾನೆಯನ್ನು ದುಬಾರೆ ಕ್ಯಾಂಪ್ಗೆ ರವಾನಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ಕೌದಳ್ಳಿ ಅರಣ್ಯ ಪ್ರದೇಶದಿಂದ ಆಹಾರ ಅರಸಿ ಹಲಗೂರು ಮಾರ್ಗದ ಮೂಲಕ ಶಿಂಷಾ ನದಿಯಲ್ಲಿ ಸಾಗಿ ಬಂದಿರುವ ಈ ಆನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೂಳಗೆರೆ ಗ್ರಾಮದ ಬಳಿ ನಿನ್ನೆ ಕಾಣಿಸಿಕೊಂಡಿತ್ತು.ಇದರಿಂದಾಗಿ ಜನರು ಆತಂಕಕ್ಕೀಡಾಗಿದ್ದರು.

ಕಾಡಾನೆ ಕಾಣಿಸಿಕೊಂಡಿರುವ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳ ತಂಡ ಜನರು ನದಿ ಪಾತ್ರದ ಜಮೀನಿಗೆ ಹೋಗದಂತೆ ಹಾಗೂ ಮನೆಗಳಿಂದ ಹೊರ ಬರದಂತೆ ಧ್ವನಿ ವರ್ಧಕ ಮೂಲಕ ಎಚ್ಚರಿಕೆ ನೀಡಿದ್ದರು. ಇನ್ನು ಈ ಆನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಸೆರೆಹಿಡಿದು ಅರಣ್ಯ ವಲಯಕ್ಕೆ ಬಿಡುವ ಸಮಯದಲ್ಲಿ ಕೊರಳಿಗೆ ರೇಡಿಯೋ ಕಾಲರ್ ಅಳವಡಿಸಲಾಗಿತು. ಇದರಿಂದ ಸಕಲೇಶಪುರ ಆನೆ ಎಂದು ಇಲಾಖೆಯ ಅಧಿಕಾರಿಗಳು ದೃಢಪಡಿಸಿದ್ದರು. ಬಳಿಕ ಆನೆಯನ್ನು ಅರಣ್ಯಾ ಇಲಾಖೆಯ ಅಧಿಕಾರಿಗಳು ಚಾಮರಾಜನಗರ ಜಿಲ್ಲೆಯ ಕೌದಳ್ಳಿ ಅರಣ್ಯಾ ಪ್ರದೇಶಕ್ಕೆ ಬಿಟ್ಟಿದ್ದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

ಮುಂದಿನ ಸುದ್ದಿ
Show comments