ನೀವು ಶಾಸಕರೊ ಅಥವಾ ಟೆರರಿಸ್ಟ್ ಗಳೋ: ಸುಮಲತಾ ಆಕ್ರೋಶ

Webdunia
ಬುಧವಾರ, 7 ಜುಲೈ 2021 (16:20 IST)
ನಮ್ಮ ಬಳಿ ಮಿಸೈಲ್ ಇದೆ. ಬಾಂಬ್ ಇದೆ ಅಂತಿರಾ? ನೀವು ಶಾಸಕರೊ ಅಥವಾ ಟೆರರಿಸ್ಟ್ ಗಳೋ, ಇಂತಹ ಮಾತನಾಡಿದ್ದಕ್ಕೆ ಜನ ಬುದ್ದಿ ಕಲಿಸಿದ್ದಾರೆ. ಇನ್ನೂ ಬುದ್ದಿ ಕಲಿತಿಲ್ಲ ಅಂದರೆ ಜನರೇ ಮತ್ತೆ ಬುದ್ದಿ ಕಲಿಸುತ್ತಾರೆ ಎಂದು ಸಂಸದೆ ಸುಮಲತಾ ಅಂಬರೀಶ್ ತಿರುಗೇಟು ನೀಡಿದ್ದಾರೆ.
ಮಂಡ್ಯದ ಬೇಬಿ ಬೆಟ್ಟದಲ್ಲಿನ ಅಕ್ರಮ ಗಣಿಗಾರಿಕೆ ಪ್ರದೇಶಗಳಿಗೆ ಬುಧವಾರ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಮತ್ತು 8 ಶಾಸಕರ ವಿರುದ್ಧ ಹೋರಾಡಿ ಗೆದ್ದವಳು. ನಿಮ್ಮ ಮಾತುಗಳಿಂದ ಜನರು ಮೋಸ ಹೋಗ್ತಾರೆ ಅಂದುಕೊಂಡಿದ್ದರೆ ನೋ ವೇ ಚಾನ್ಸೆ ಇಲ್ಲ ಎಂದರು.
ಪ್ರಜ್ವಲ್ ರೇವಣ್ಣಗೆ ಒಳ್ಳೆಯ ಭವಿಷ್ಯ ಇದೆ ಎಂಬ ಹೇಳಿಕೆ ದೇವೇಗೌಡರ ಕುಟುಂಬ ಒಡೆಯುವ ಉದ್ದೇಶದಿಂದ ಕೂಡಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಸುಮಲತಾ, ದೇವೇಗೌಡರ ಕುಟುಂಬ ಒಡೆದು ನನಗೇನೂ ಆಗಬೇಕಿಲ್ಲ. ಅದರಿಂದ ನನಗೆ ಲಾಭವೂ ಇಲ್ಲ. ಅಣ್ಣನ ಮಗ ಪ್ರಜ್ವಲ್ ಹೊಗಳಿದರೆ ಇವರಿಗೆ ಖುಷಿ ಆಗಬೇಕು. ಸಿಟ್ಟು ಯಾಕೆ ಎಂದು ಅವರು ಪ್ರಶ್ನಿಸಿದರು.
ಸಿನಿಮಾದಲ್ಲಿ ರಾಜಕೀಯ, ನಟನೆ ಬಗ್ಗೆ ಮಾತನಾಡುವ ಹಕ್ಕು ನಿಮಗಿಲ್ಲ. ಅವರು ಕೇವಲ ತೆರೆಯ ಮೇಲೆ ನಟಿಸುತ್ತಾರೆ. ಆದರೆ ನೀವು ಅದಕ್ಕಿಂತ ಚೆನ್ನಾಗಿ ನಟಿಸುತ್ತಿದ್ದೀರಿ. ನಿಮ್ಮ ರಾಜಕಾರಣದ ಡ್ರಾಮ ಇನ್ನು ಮುಂದೆ ನಡೆಯಲ್ಲ. ನಿಮ್ಮ ತಪ್ಪನ್ನು ತಿದ್ದಿಕೊಳ್ಳಲು ನೀವು ತಯಾರಿಲ್ಲ. ಇದು ಹೊಸದೇನೂ ಅಲ್ಲ. ಅಂಬರೀಶ್ ಮುಂದೆ ನಿಂತುಕೊಳ್ಳುವುದಕ್ಕೂ ಹೆದರುತ್ತಿದ್ದವರು ಈಗ ಮಾತನಾಡುತ್ತಿದ್ದಾರೆ ಎಂದು ಅವರು ಹೇಳಿದರು.
ಅಕ್ರಮ ಗಣಿಗಾರಿಕೆ ಪ್ರದೇಶಕ್ಕೆ ಭೇಟಿ ನೀಡಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಗಣಿ ಸಚಿವರನ್ನು ಕರೆದುಕೊಂಡು ಹೋಗಿ ದಂಡ ಹಾಕಿಸಿದ್ದೆ. ಅಕ್ರಮ ಗಣಿಗಾರಿಕೆ ತಡೆಯುವುದು ಮುಖ್ಯ. ನನ್ನನ್ನು ಸೋಲಿಸುವುದೇ ನಿಮ್ಮ ಗುರಿ ಆದರೆ ಅದಕ್ಕೆ ಸ್ವಾಗತ ಎಂದು ಅವರು ಪ್ರತಿ ಸವಾಲು ಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವೃಕ್ಷ ಮಾತೆ, ಶತಾಯುಷಿ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ

ಮಹಾಘಟಬಂಧನದ ಸಿಎಂ ಅಭ್ಯರ್ಥಿಯಾದ ತೇಜಸ್ವಿ ಯಾದವ್ ಸ್ಥಿತಿ ಶಾಕಿಂಗ್

ಮತ್ತೊಮ್ಮೆ ಸೋತ ರಾಹುಲ್ ಗಾಂಧಿಗೆ ಅಭಿನಂದನೆ, ಕರ್ನಾಟಕದಲ್ಲೂ ಹೀಗೇ ಆಗುತ್ತೆ: ಆರ್ ಅಶೋಕ್

Bihar election result live: ಬಿಹಾರದಲ್ಲಿ ಎನ್ ಡಿಎ ಹೇಗೆ ಗೆಲ್ತಿದೆ ಗೊತ್ತಿಲ್ಲ: ಸಿಎಂ ಸಿದ್ದರಾಮಯ್ಯ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments