Webdunia - Bharat's app for daily news and videos

Install App

ಸುಮಲತಾರನ್ನ ಮಂಡ್ಯದಿಂದ ಓಡಿಸಲು ನಿರ್ಧರಿಸಿದ್ದಾರೆ: ರಾಕ್ ಲೈನ್ ವೆಂಕಟೇಶ್

Webdunia
ಶನಿವಾರ, 10 ಜುಲೈ 2021 (14:02 IST)
ಸುಮಲತಾ ಅವರನ್ನು ಮಂಡ್ಯದಿಂದ ಓಡಿಸಲು ತೀರ್ಮಾನ ಮಾಡಿದ್ದಾರೆ. ಹಾಗಾಗಿ ಈ ರೀತಿ ಮಾಡುತ್ತಿದ್ದಾರೆ ಎಂದು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಹೇಳಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸಕ್ಕೆ ಜೆಡಿಎಸ್ ಕಾರ್ಯಕರ್ತರು ಮುತ್ತಿಗೆ ಹಾಕಿರುವುದಕ್ಕೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಮಂಡ್ಯ ರಾಜಕಾರಣಕ್ಕೆ ಹೋಗಿಲ್ಲ. ನಾನು ಯಾವ ವಿಚಾರದಲ್ಲೂ ಮೂಗು ತೂರಿಸುವ ಕೆಲಸ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ಕುಮಾರಸ್ವಾಮಿ ವಿಚಾರದಲ್ಲಿ ಹೇಳಿಕೆ ಕೊಟ್ಟಿರೋದು ನಿಜ.  ಮಾಧ್ಯಮಗಳು ಕೇಳುವಂತಹ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ. ಅಂಬರೀಷ್ ಅವರ ಸ್ಮಾರಕ ವಿಚಾರದಲ್ಲಿ ಮಾತಾಡಿದ್ದೇನೆ. ಸ್ಮಾರಕ ಮಾಡೋದಕ್ಕೆ ಮುಂದಾಗಿದ್ದು ಕುಮಾರಸ್ವಾಮಿ. ಅಂಬರೀಷ್ ವಿಚಾರ ಬಂದಾಗ ಮಾತ್ರ ಮಾತಾನಾಡಿದ್ದೇನೆ ಎಂದು ಅವರು ಹೇಳಿದರು.
ಕುಮಾರಸ್ವಾಮಿ ಬಗ್ಗೆ ಮಾತಾನಾಡುವವರ ಬಗ್ಗೆ ಪ್ರತಿಭಟನೆ ಮಾಡಲ್ಲ. ಅದನ್ನ ಬಿಟ್ಟು ನನ್ನ ಮನೆ ಮುಂದೆ, ಅಂಬರೀಶ್ ಮನೆ ಮುಂದೆ ಪ್ರತಿಭಟನೆ ಮಾಡುತ್ತಾರೆ. ನಾನು ಮನಸ್ಸು ಮಾಡಿದರೆ ಎಂಪಿ ಹಾಗೂ ಎಂಎಲ್ ಎ ಆಗ್ತಿನಿ. ಆದರೆ ಅದು ನನಗೆ ಬೇಕಿಲ್ಲ. ಕುಮಾರಸ್ವಾಮಿಗೆ ನೋವು ಆಗೋತರ ಮಾತಾಡಿದ್ರೆ ಕ್ಷಮೆ ಕೇಳ್ತಿನಿ ಎಂದು ವಿವಾದಕ್ಕೆ ತೆರೆ ಎಳೆದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments