Webdunia - Bharat's app for daily news and videos

Install App

ಸುಮಲತಾಗೆ ಬಿರುಕಿಗೂ, ದುರಸ್ತಿಗೂ ವ್ಯತ್ಯಾಸ ಗೊತ್ತಿಲ್ಲ: ಜಿಟಿ ದೇವೇಗೌಡ

Webdunia
ಭಾನುವಾರ, 11 ಜುಲೈ 2021 (19:45 IST)
ಸಂಸದೆ ಸುಮಲತಾ ಅವರಿಗೆ ಬಿರುಕಿಗೂ ಮತ್ತು ದುರಸ್ತಿಗೂ ವ್ಯತ್ಯಾಸ ಗೊತ್ತಿಲ್ಲ. ಹೀಗಾಗಿ ಕೆಆರ್ ಎಸ್ ಡ್ಯಾಂ ಬಿರುಕು ಬಿಟ್ಟಿದೆ ಎಂದು ಹೇಳಿ ಪದ ಪ್ರಯೋಗ ಗೊತ್ತಿಲ್ಲದೇ ಏನೋ ಹೇಳಿದ್ದಾರೆ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅಭಿಪ್ರಾಯಪಟ್ಟಿದ್ದಾರೆ.
ಮೈಸೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಆರ್ ಎಸ್ ಉಳಿವಿನ ಬಗ್ಗೆ ಎಲ್ಲರಿಗೂ ಕಾಳಜಿ ಇದೆ. ಕೆಆರ್ ಎಸ್ ಬಿರುಕು ಬಿಟ್ಟಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಈ ವಿಚಾರದಲ್ಲಿ ಗೊಂದಲ ಸೃಷ್ಟಿ ಸರಿಯಲ್ಲ ಎಂದರು.
ಮಂಡ್ಯ ಜಗಳ ಯಾರಿಗೂ ಶೋಭೆ ತರುವಂತದ್ದಲ್ಲ. ಸುಮಲತಾ ಹಾಗೂ ಜೆಡಿಎಸ್ ಮುಖಂಡರು ಜನರ ಭಾವನೆಗಳನ್ನು ಅರ್ಥ ಮಾಡಿಕೊಳ್ಳಬೇಕು. ಈ ಕಿತ್ತಾಟ ಇಬ್ಬರಿಗೂ ನಷ್ಟವನ್ನುಂಟು ಮಾಡುತ್ತೆ. ಮಾತಿನ ಸಮರ ಯಾರಿಗೂ ಲಾಭವನ್ನುಂಟು ಮಾಡುವುದಿಲ್ಲ. ಈ ಮಾತಿನ ಸಮರವನ್ನ ಅಂತ್ಯ ಮಾಡಬೇಕು ಎಂದು ಅವರು ಸಲಹೆ ನೀಡಿದರು.
ಕೆಆರ್ ಎಸ್ ವಿಷಯದಲ್ಲಿ ಸರ್ಕಾರ ಕಠಿಣ ನಿರ್ಧಾರ ತೆಗೆದುಕೊಳ್ಳಬೇಕು. ಕೆಆರ್ ಎಸ್ ಗೆ ತೊಂದರೆಯಾದರೆ ಗಣಿಗಾರಿಕೆಯನ್ನ ಸಂಪೂರ್ಣವಾಗಿ ನಿಲ್ಲಿಸಬೇಕು. ತೊಂದರೆ ಇಲ್ಲವಾದರೆ ಗಣಿಗಾರಿಕೆಗೆ ಸಮ್ಮತಿ ಸೂಚಿಸಬೇಕು. ಕೆ ಆರ್ ಎಸ್ ವಿಚಾರದಲ್ಲಿ ಸಮಗ್ರ ವರದಿಗಾಗಿ ತಜ್ಞರ ಸಮಿತಿ ರಚಿಸಬೇಕು ಎಂದು ಅವರು ಸರಕಾರವನ್ನು ಒತ್ತಾಯಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments