Webdunia - Bharat's app for daily news and videos

Install App

ಕೆಆರ್ ಎಸ್ ಡ್ಯಾಂ ಬಗ್ಗೆ ಮಾತನಾಡೋದೇ ತಪ್ಪಾ? ಸುಮಲತಾ

Webdunia
ಬುಧವಾರ, 14 ಜುಲೈ 2021 (15:23 IST)
ಕೆಆರ್ ಎಸ್ ಡ್ಯಾಂ ಸಣ್ಣಪುಟ್ಟ ಬಿರುಕು ಕಾಣಿಸಿಕೊಳ್ಳುತ್ತಿದ್ದು, ಇದರ ದುರಸ್ತಿಗಾಗಿ ಈಗಗಲೇ 67 ಕೋಟಿ ರೂ. ವೆಚ್ಚ ಮಾಡಲಾಗಿದೆ. ಆದರೆ ನಾನು ಡ್ಯಾಂ ಸುರಕ್ಷತೆ ಬಗ್ಗೆ ಮಾತನಾಡಿದರೆ ರಾಜಕೀಯ ಮಾಡ್ತಾರೆ ಅಂತಾರೆ. ಈ ಬಗ್ಗೆ ಮಾತನಾಡೋದೇ ತಪ್ಪಾ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.
ಬುಧವಾರ ಕೆಆರ್ ಎಸ್ ಡ್ಯಾಂ ವೀಕ್ಷಣೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಆರ್ ಎಸ್ ಡ್ಯಾಂನಲ್ಲಿ ಬಿರುಕು ಬಿಟ್ಟಿದೆ ಅಂದರೆ ಪಿಲ್ಲರ್ ನಲ್ಲಿ ಬಿರುಕು ಬಿಟ್ಟಿದೆ ಅಂತಲ್ಲ. ಡ್ಯಾಂನಲ್ಲಿ ಹಲವಾರು ಕಡೆ ಸಣ್ಣಪುಟ್ಟ ಬಿರುಕು ಕಾಣಿಸಿಕೊಳ್ಳುತ್ತಲೇ ಇದೆ. ಸೀಮೆಂಟ್ ಹಾಕಿ ತೇಪೆ ಹಚ್ಚುವ ಮೂಲಕ ಬಿರುಕು ಮುಚ್ಚಲಾಗಿದೆ ಎಂದರು.
ಅಕ್ರಮ ಗಣಿಗಾರಿಕೆಯಿಂದ ಈ ಬಿರುಕುಗಳು ಕಾಣಿಸಿಕೊಳ್ಳತಲೇ ಇದೆ. ಅಲ್ಲದೇ ಡ್ಯಾಂ ಸುತ್ತಮುತ್ತ ನಿರ್ದಿಷ್ಟ ದೂರದವರೆಗೆ ಗಣಿಗಾರಿಕೆ ಮಾಡುವಂತಿಲ್ಲ. ಅದು ಸಕ್ರಮವಾದರೂ ಸರಿ, ಅಕ್ರಮವಾದರೂ ಸರಿ. ಗಣಿಗಾರಿಕೆಯಿಂದ ಡ್ಯಾಂಗೆ ನಾಳೆ ಹೆಚ್ಚು ಕಡಿಮೆ ಆದರೆ ಯಾರು ಜವಾಬ್ದಾರರು ಎಂದು ಅವರು ಪ್ರಶ್ನಿಸಿದರು.
ಎಲ್ಲೆಡೆ ಗಣಿಗಾರಿಕೆ ನಿಷೇಧಿಸಿ ಎಂದು ನಾನು ಹೇಳುತ್ತಿಲ್ಲ. ಸಣ್ಣ ಪುಟ್ಟ ಬಿರುಕುಗಳೇ ನಾಳೆ ದೊಡ್ಡದಾದರೆ ಏನು ಮಾಡುವುದು. ನನ್ನ ಬಳಿ ಸಾಕ್ಷ್ಯಾಧಾರಗಳು ಇರುವುದರಿಂದಲೇ ನನ್ನ ಮಾತಿಗೆ ಬದ್ಧಳಾಗಿದ್ದೇನೆ. ಡ್ಯಾಂಗೆ ಅಪಾಯ ಬರುವವರೆಗೂ ಕಾಯಬೇಕಾ? ಇಂತಹ ಡ್ಯಾಂ ಕಟ್ಟಲು 50 ವರ್ಷ ಆದರೂ ಕಟ್ಟಲು ಸಾಧ್ಯವಿಲ್ಲ ಎಂದು ಸುಮಲತಾ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿಯ ಯಾತ್ರೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರನಾ, ಪ್ರಲ್ಹಾದ್ ಜೋಶಿನಾ: ಆರ್ ಅಶೋಕ್ ರಿಂದ ಎಡವಟ್ಟಾಯ್ತು

ಅಫ್ಘಾನಿಸ್ತಾನ ಭೀಕರ ಭೂಕಂಪ: ವಿದೇಶದಲ್ಲಿದ್ರೂ ಕರ್ತವ್ಯ ಮರೆಯದ ಪ್ರಧಾನಿ ನರೇಂದ್ರ ಮೋದಿ

ನಾನೂನು ಹಿಂದೂನೇ, ಮಂದಿರ ಕಟ್ಟಿಸಿದ್ದೀನಿ, ಆದ್ರೂ ಹಿಂಗೆಲ್ಲಾ ಹೇಳ್ತಾರೆ ಎಂದ್ರು ಸಿಎಂ ಸಿದ್ದರಾಮಯ್ಯ

ಚಿನ್ನಯ್ಯ ತಂದ ಬುರುಡೆ ಮೂಲ ಹುಡುಕಾಟದಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments