Webdunia - Bharat's app for daily news and videos

Install App

ಕೆಆರ್ ಎಸ್ ಡ್ಯಾಂ ಬಗ್ಗೆ ಮಾತನಾಡೋದೇ ತಪ್ಪಾ? ಸುಮಲತಾ

Webdunia
ಬುಧವಾರ, 14 ಜುಲೈ 2021 (15:23 IST)
ಕೆಆರ್ ಎಸ್ ಡ್ಯಾಂ ಸಣ್ಣಪುಟ್ಟ ಬಿರುಕು ಕಾಣಿಸಿಕೊಳ್ಳುತ್ತಿದ್ದು, ಇದರ ದುರಸ್ತಿಗಾಗಿ ಈಗಗಲೇ 67 ಕೋಟಿ ರೂ. ವೆಚ್ಚ ಮಾಡಲಾಗಿದೆ. ಆದರೆ ನಾನು ಡ್ಯಾಂ ಸುರಕ್ಷತೆ ಬಗ್ಗೆ ಮಾತನಾಡಿದರೆ ರಾಜಕೀಯ ಮಾಡ್ತಾರೆ ಅಂತಾರೆ. ಈ ಬಗ್ಗೆ ಮಾತನಾಡೋದೇ ತಪ್ಪಾ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.
ಬುಧವಾರ ಕೆಆರ್ ಎಸ್ ಡ್ಯಾಂ ವೀಕ್ಷಣೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಆರ್ ಎಸ್ ಡ್ಯಾಂನಲ್ಲಿ ಬಿರುಕು ಬಿಟ್ಟಿದೆ ಅಂದರೆ ಪಿಲ್ಲರ್ ನಲ್ಲಿ ಬಿರುಕು ಬಿಟ್ಟಿದೆ ಅಂತಲ್ಲ. ಡ್ಯಾಂನಲ್ಲಿ ಹಲವಾರು ಕಡೆ ಸಣ್ಣಪುಟ್ಟ ಬಿರುಕು ಕಾಣಿಸಿಕೊಳ್ಳುತ್ತಲೇ ಇದೆ. ಸೀಮೆಂಟ್ ಹಾಕಿ ತೇಪೆ ಹಚ್ಚುವ ಮೂಲಕ ಬಿರುಕು ಮುಚ್ಚಲಾಗಿದೆ ಎಂದರು.
ಅಕ್ರಮ ಗಣಿಗಾರಿಕೆಯಿಂದ ಈ ಬಿರುಕುಗಳು ಕಾಣಿಸಿಕೊಳ್ಳತಲೇ ಇದೆ. ಅಲ್ಲದೇ ಡ್ಯಾಂ ಸುತ್ತಮುತ್ತ ನಿರ್ದಿಷ್ಟ ದೂರದವರೆಗೆ ಗಣಿಗಾರಿಕೆ ಮಾಡುವಂತಿಲ್ಲ. ಅದು ಸಕ್ರಮವಾದರೂ ಸರಿ, ಅಕ್ರಮವಾದರೂ ಸರಿ. ಗಣಿಗಾರಿಕೆಯಿಂದ ಡ್ಯಾಂಗೆ ನಾಳೆ ಹೆಚ್ಚು ಕಡಿಮೆ ಆದರೆ ಯಾರು ಜವಾಬ್ದಾರರು ಎಂದು ಅವರು ಪ್ರಶ್ನಿಸಿದರು.
ಎಲ್ಲೆಡೆ ಗಣಿಗಾರಿಕೆ ನಿಷೇಧಿಸಿ ಎಂದು ನಾನು ಹೇಳುತ್ತಿಲ್ಲ. ಸಣ್ಣ ಪುಟ್ಟ ಬಿರುಕುಗಳೇ ನಾಳೆ ದೊಡ್ಡದಾದರೆ ಏನು ಮಾಡುವುದು. ನನ್ನ ಬಳಿ ಸಾಕ್ಷ್ಯಾಧಾರಗಳು ಇರುವುದರಿಂದಲೇ ನನ್ನ ಮಾತಿಗೆ ಬದ್ಧಳಾಗಿದ್ದೇನೆ. ಡ್ಯಾಂಗೆ ಅಪಾಯ ಬರುವವರೆಗೂ ಕಾಯಬೇಕಾ? ಇಂತಹ ಡ್ಯಾಂ ಕಟ್ಟಲು 50 ವರ್ಷ ಆದರೂ ಕಟ್ಟಲು ಸಾಧ್ಯವಿಲ್ಲ ಎಂದು ಸುಮಲತಾ ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments