ರಾಜ್ಯಪಾಲರಿಗೆ ಅಕ್ರಮ ಗಣಿಗಾರಿಕೆಯ ದೂರು ನೀಡಿದ ಸುಮಲತಾ

Webdunia
ಶನಿವಾರ, 17 ಜುಲೈ 2021 (20:20 IST)
ಕೆಆರ್ ಎಸ್ ಜಲಾಶಯದ ಬಳಿಯ ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.
ಶನಿವಾರ ಬೆಳಿಗ್ಗೆ ಬೆಂಗಳೂರಿನ ರಾಜ್ಯಪಾಲರ ಭವನದಲ್ಲಿ ನೂತನ ರಾಜ್ಯಪಾಲ ಥಾಮರ್ ಸಿಂಗ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ ಸುಮಲತಾ ಬೇಬಿ ಬೆಟ್ಟದಲ್ಲಿನ ಅಕ್ರಮ ಗಣಿಗಾರಿಕೆಯಿಂದ ಸ್ಥಳೀಯರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ, ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಿದ್ದು, ಅದರ ಪರಿಣಾಮಗಳ ಬಗ್ಗೆ ವಿವರಿಸಿದ್ದೇನೆ. ರಾಜ್ಯಪಾಲರು ಕೆಲವು ಸಲಹೆಗಳನ್ನು ನೀಡಿದ್ದಾರೆ. ಸರ್ಕಾರದ ಗಮನಕ್ಕೆ ತರುವುದಾಗಿ ಅವರು ಭರವಸೆ ನೀಡಿದ್ದಾರೆ ಎಂದರು ಹೇಳಿದರು.
ಇದೇ ದರ್ಶನ್ ಮತ್ತು ನಿರ್ಮಾಪಕ ಉಮಾಪತಿ ನಡುವೆ ಆಸ್ತಿಗಾಗಿ ಜಟಾಪಟಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸುಮಲತಾ, ಪ್ರಕರಣದ ಬಗ್ಗೆ ನಾನು ಮಾತಾಡೋಕೆ ಇಷ್ಟ ಪಡಲ್ಲ. ನಾನು ಅನಾವಶ್ಯಕ ಹೇಳಿಕೆ ಕೊಡೋದು ಸರಿಯಲ್ಲ ಎಂದರು.
ಹೊಟೇಲ್ ನಲ್ಲಿ ನಡೆದ ಹಲ್ಲೆ ಬಗ್ಗೆ ತನಿಖೆ ನಡೀತಿದೆ. ಸತ್ಯಾಂಶ ಹೊರಗೆ ಬರಲಿ. ಹಲ್ಲೆ ಪ್ರಕರಣ ಬಗ್ಗೆ ನನಗೆ ಗೊತ್ತಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿರ್ಮಾಪಕರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ನಟ ಕಿಚ್ಚ ಸುದೀಪ್‌ಗೆ ಇಂದು ಕೋರ್ಟ್‌ಗೆ ಹಾಜರಾಗಬೇಕಿದೆ

ಮತ್ತೇ ರಾಜಕೀಯದಲ್ಲಿ ಆಕ್ಟೀವ್ ಆಗಲು ಸುಮಲತಾ ಅಂಬರೀಶ್ ಪ್ಲಾನ್, ಇದರ ಹಿಂದಿದೆ ಈ ಉದ್ದೇಶ

ಮಾಲ್ವೀಯ ನಗರ ಅಗ್ನಿ ಅವಘಡ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮದುವೆಯಾಗಿ ಮನೆಬಿಟ್ಟು ಹೋಗುವ ಮಗಳಿಗೆ ತಂದೆಯೊಬ್ಬ ಭಾವನಾತ್ಮಕ ವಿದಾಯ, Video

ರಾಮಲಿಂಗಾ ರೆಡ್ಡಿ ರಾಜೀನಾಮೆ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments