ರಾಜ್ಯಪಾಲರಿಗೆ ಅಕ್ರಮ ಗಣಿಗಾರಿಕೆಯ ದೂರು ನೀಡಿದ ಸುಮಲತಾ

Webdunia
ಶನಿವಾರ, 17 ಜುಲೈ 2021 (20:20 IST)
ಕೆಆರ್ ಎಸ್ ಜಲಾಶಯದ ಬಳಿಯ ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.
ಶನಿವಾರ ಬೆಳಿಗ್ಗೆ ಬೆಂಗಳೂರಿನ ರಾಜ್ಯಪಾಲರ ಭವನದಲ್ಲಿ ನೂತನ ರಾಜ್ಯಪಾಲ ಥಾಮರ್ ಸಿಂಗ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ ಸುಮಲತಾ ಬೇಬಿ ಬೆಟ್ಟದಲ್ಲಿನ ಅಕ್ರಮ ಗಣಿಗಾರಿಕೆಯಿಂದ ಸ್ಥಳೀಯರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ, ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಿದ್ದು, ಅದರ ಪರಿಣಾಮಗಳ ಬಗ್ಗೆ ವಿವರಿಸಿದ್ದೇನೆ. ರಾಜ್ಯಪಾಲರು ಕೆಲವು ಸಲಹೆಗಳನ್ನು ನೀಡಿದ್ದಾರೆ. ಸರ್ಕಾರದ ಗಮನಕ್ಕೆ ತರುವುದಾಗಿ ಅವರು ಭರವಸೆ ನೀಡಿದ್ದಾರೆ ಎಂದರು ಹೇಳಿದರು.
ಇದೇ ದರ್ಶನ್ ಮತ್ತು ನಿರ್ಮಾಪಕ ಉಮಾಪತಿ ನಡುವೆ ಆಸ್ತಿಗಾಗಿ ಜಟಾಪಟಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸುಮಲತಾ, ಪ್ರಕರಣದ ಬಗ್ಗೆ ನಾನು ಮಾತಾಡೋಕೆ ಇಷ್ಟ ಪಡಲ್ಲ. ನಾನು ಅನಾವಶ್ಯಕ ಹೇಳಿಕೆ ಕೊಡೋದು ಸರಿಯಲ್ಲ ಎಂದರು.
ಹೊಟೇಲ್ ನಲ್ಲಿ ನಡೆದ ಹಲ್ಲೆ ಬಗ್ಗೆ ತನಿಖೆ ನಡೀತಿದೆ. ಸತ್ಯಾಂಶ ಹೊರಗೆ ಬರಲಿ. ಹಲ್ಲೆ ಪ್ರಕರಣ ಬಗ್ಗೆ ನನಗೆ ಗೊತ್ತಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಏ17ಕ್ಕೆ ಶಿಕ್ಷೆ ಪ್ರಕಟ

ಶ್ರೀರಂಗಪಟ್ಟಣದ ಮುತ್ತು ಮಾರಮ್ಮ ದೇವಿ ಕರಗದಲ್ಲಿ ಅವಘಡ, ಮೂವರಿಗೆ ಗಾಯ

17ವರ್ಷದ ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟಕ್ಕೆ 9 ಕಾರ್ಮಿಕರು ಸಾವು, ಹಲವು ಮಂದಿಗೆ ಗಾಯ

ಪಶು ವೈದ್ಯೆ ಸಾವಿಗೆ ಕಾರಣವಾಗಿದ್ದ ತ್ಯಾವರೆಕೊಪ್ಪ ಮೃಗಾಲಯದ ಗರ್ಭಿಣಿ ನೀರಾನೆ ಸಾವು

ಮುಂದಿನ ಸುದ್ದಿ
Show comments