Select Your Language

Notifications

webdunia
webdunia
webdunia
webdunia

ಮಂಡ್ಯ ಟಿಕೆಟ್ ಗಾಗಿ ದೆಹಲಿಯಲ್ಲೇ ಮೊಕ್ಕಾಂ ಹೂಡಿದ ಸುಮಲತಾ

Sumalatha Ambareesh
Photo Courtesy: Twitter
ನವದೆಹಲಿ: ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್ ಗಾಗಿ ಪಟ್ಟು ಹಿಡಿದಿರುವ ಸುಮಲತಾ ಅಂಬರೀಶ್ ಲಾಬಿ ನಡೆಸಲು ದೆಹಲಿಯಲ್ಲೇ ಬೀಡುಬಿಟ್ಟಿದ್ದಾರೆ.

ದೆಹಲಿಯಲ್ಲಿ ನಿನ್ನೆ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿರುವ ಸುಮಲತಾ ತಮಗೇ ಮಂಡ್ಯ ಟಿಕೆಟ್ ನೀಡುವಂತೆ ಪಟ್ಟು ಹಿಡಿದಿದ್ದಾರೆ. ತಮಗೇ ಮಂಡ್ಯ ಟಿಕೆಟ್ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳಲ್ಲಿ ಜೆಡಿಎಸ್ ಗೆ ಟಿಕೆಟ್ ಸಿಗಲಿದೆ ಎಂಬ ಮಾತು ಕೇಳಿಬರುತ್ತಿದೆ. ಇದರಲ್ಲಿ ಸತ್ಯಾಂಶವಿಲ್ಲ ಎಂದು ಸುಮಲತಾ ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅದ್ಯಕ್ಷ ಜೆಪಿ ನಡ್ಡಾರನ್ನು ನಿನ್ನೆ ಭೇಟಿ ಮಾಡಿದ್ದ ಸುಮಲತಾ ಬಳಿಕ ನಾಳೆಯವರೆಗೂ ಇಲ್ಲಿಯೇ ಇರಬೇಕು ಎಂದು ಹೇಳಿರುವುದಾಗಿ ಹೇಳಿದ್ದಾರೆ. ಹೀಗಾಗಿ ಸುಮಲತಾ ಇಂದೂ ದೆಹಲಿಯಲ್ಲಿ ಠಿಕಾಣಿ ಹೂಡಿದ್ದಾರೆ. ಅವರ ಭವಿಷ್ಯ ಇಂದು ತೀರ್ಮಾನವಾಗಲಿದೆ.

ನೀವು ನಿಶ್ಚಿಂತರಾಗಿರಿ ನಿಮ್ಮ ಜೊತೆ ನಾವಿದ್ದೇವೆ ಎಂದು ಹೈಕಮಾಂಡ್ ಭರವಸೆ ಕೊಟ್ಟಿದೆ ಎಂದು ಸುಮಲತಾ ಹೇಳಿಕೊಂಡಿದ್ದಾರೆ. ಹಾಗಿದ್ದರೂ ದೆಹಲಿಯಲ್ಲೇ ಇದ್ದು ಟಿಕೆಟ್ ಗಾಗಿ ತಮ್ಮ ಪ್ರಯತ್ನ ಇಂದೂ ಮುಂದುವರಿಸಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸದಾನಂದ ಗೌಡರಿಗೆ ಕಾಂಗ್ರೆಸ್ ಆಹ್ವಾನ: ಇಂದು ತೀರ್ಮಾನ