ಮಂಡ್ಯ ಟಿಕೆಟ್ ಯಾರಿಗೆ? ಸುಮಲತಾ ಭವಿಷ್ಯ ಇಂದು ನಿರ್ಧಾರ

Krishnaveni K
ಭಾನುವಾರ, 4 ಫೆಬ್ರವರಿ 2024 (10:04 IST)
ಮಂಡ್ಯ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವಿನ ಮೈತ್ರಿ ಈಗ ಹಾಲಿ ಸಂಸದೆ ಸುಮಲತಾ ಅಂಬರೀಶ್ ಗೆ ಉರುಳಾಗಿದೆ.

ಮಂಡ್ಯ ಟಿಕೆಟ್ ಗಾಗಿ ಸುಮಲತಾ ಮತ್ತು ಜೆಡಿಎಸ್ ನಡುವೆ ತೀವ್ರ ಪೈಪೋಟಿಯಿದೆ. ಕಳೆದ ಬಾರಿ ಇದೇ ಕ್ಷೇತ್ರದಲ್ಲಿ ಜೆಡಿಎಸ್ ಸುಮಲತಾ ಎದುರು ಸೋತಿತ್ತು. ಆದರೆ ಈ ಬಾರಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಕಾರಣ ಜೆಡಿಎಸ್ ಆ ಕ್ಷೇತ್ರಕ್ಕೆ ಬೇಡಿಕೆಯಿಟ್ಟಿದೆ. ಆದರೆ ಈಗ ಬಿಜೆಪಿ ಸೇರಿರುವ ಸುಮಲತಾಗೆ ಮಂಡ್ಯ ಬಿಟ್ಟುಕೊಡುವ ಮನಸ್ಸಿಲ್ಲ. ಸ್ಪರ್ಧಿಸಿದರೆ ಮಂಡ್ಯದಿಂದಲೇ ಎಂದು ಪಟ್ಟುಹಿಡಿದಿದ್ದಾರೆ. ಇದಕ್ಕೆ ಅವರಿಗೆ ಸ್ಥಳೀಯ ನಾಯಕರ ಬೆಂಬಲವೂ ಇದೆ.

ಇಂದು ನಡೆಯಲಿದೆ ಮಹತ್ವದ ಸಭೆ
ಜೆಡಿಎಸ್ ಈಗಾಗಲೇ ಮಂಡ್ಯ, ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಬೇಡಿಕೆಯಿಟ್ಟಿದೆ. ಆದರೆ ಮಂಡ್ಯದಲ್ಲಿ ಟಿಕೆಟ್ ಜೆಡಿಎಸ್ ಗೆ ಬಿಟ್ಟು ಕೊಡುವುದಕ್ಕೆ ಬಿಜೆಪಿಯ ಸ್ಥಳೀಯ ನಾಯಕರಿಂದ ವಿರೋಧವಿದೆ. ಹೀಗಾಗಿ ಇದು ಸುಮಲತಾಗೆ ಪ್ಲಸ್ ಪಾಯಿಂಟ್ ಆಗಬಹುದು. ಇಂದು ಬೆಳಿಗ್ಗೆ 11 ಗಂಟೆಗೆ ಬಿಜೆಪಿ ಜಿಲ್ಲಾ ನಾಯಕರು ಸಭೆ ನಡೆಸಲಿದ್ದು, ತಮ್ಮ ಅಂತಿಮ ನಿರ್ಧಾರ ಮಾಡಲಿದ್ದಾರೆ. ಹೀಗಾಗಿ ಮಂಡ್ಯದಲ್ಲಿ ಸುಮಲತಾ ಇರುತ್ತಾರೆಯೇ ಜೆಡಿಎಸ್ ಬರುತ್ತದೆಯೇ ಎನ್ನುವುದಕ್ಕೆ ಇಂದು ಒಂದು ಹಂತದ ಉತ್ತರ ಸಿಗಲಿದೆ.

ಸುಮಲತಾಗೆ ಕಾಂಗ್ರೆಸ್ ಬಾಗಿಲು ಕೂಡಾ ಬಂದ್ ಆಗಿರುವುದರಿಂದ ಅವರ ಸ್ಪರ್ಧೆ ವಿಚಾರ ಅತಂತ್ರವಾಗಿದೆ. ಮಂಡ್ಯ ಬಿಟ್ಟರೆ ಸುಮಲತಾಗೆ ಬಿಜೆಪಿಯೇನೋ ಬೇರೆ ಕಡೆ ಟಿಕೆಟ್ ಆಫರ್ ನೀಡಬಹುದು. ಆದರೆ ಅವರು ಅಲ್ಲಿಂದ ಸ್ಪರ್ಧಿಸುವ ಸಾಧ‍್ಯತೆಯಿಲ್ಲ. ಹೀಗಾಗಿ ಇಂದಿನ ಸಭೆ ಮಹತ್ವ ಪಡೆದುಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆಗೆ ಬಿಗ್ ಟ್ವಿಸ್ಟ್: ರಾಜೀನಾಮೆಗೆ ಸಿದ್ದರಾಮಯ್ಯ ನಿರ್ಧಾರ?

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮುಂದಿನ ಸುದ್ದಿ
Show comments