Webdunia - Bharat's app for daily news and videos

Install App

ಇಂದು ಬೆಂಬಲಿಗರ ಜೊತೆ ಸುಮಲತಾ ಸಭೆ

Krishnaveni K
ಶನಿವಾರ, 30 ಮಾರ್ಚ್ 2024 (09:01 IST)
ಮಂಡ್ಯ: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಬಿಜೆಪಿ ಟಿಕೆಟ್ ಸಿಗದೇ ಇರುವುದು ಹಾಲಿ ಸಂಸದೆ ಸುಮಲತಾ ಅಸಮಾಧಾನಕ್ಕೆ ಕಾರಣವಾಗಿದೆ.

ಸ್ಪರ್ಧಿಸಿದರೆ ಮಂಡ್ಯದಿಂದಲೇ ಎಂದು ಪಟ್ಟು ಹಿಡಿದು ಕುಳಿತಿದ್ದ ಸುಮಲತಾಗೆ ಬಿಜೆಪಿ ಹೈಕಮಾಂಡ್ ನಿರಾಸೆ ಮಾಡಿದೆ. ಮಂಡ್ಯ ಕ್ಷೇತ್ರವನ್ನು ಮೈತ್ರಿ ಪಕ್ಷ ಜೆಡಿಎಸ್ ಗೆ ಬಿಟ್ಟುಕೊಟ್ಟಿದ್ದು ಸುಮಲತಾ ಅಸಮಾಧಾನ ಹೆಚ್ಚಿಸಿದೆ. ಸಾಕಷ್ಟು ಬಾರಿ ದೆಹಲಿಗೆ ಹೋಗಿ ಹೈಕಮಾಂಡ್ ಗೆ ವಿನಂತಿ ಮಾಡಿದರೂ ಪ್ರಯೋಜನವಾಗಿಲ್ಲ.

ಹೀಗಾಗಿ ಸುಮಲತಾ ಈಗ ತಮ್ಮ ನಿರ್ಧಾರ ಕೈಗೊಳ್ಳಲಿದ್ದಾರೆ. ಈಗಾಗಲೇ ತಮ್ಮ ಬೆಂಬಲಿಗರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಅವರೆಲ್ಲರೂ ಪಕ್ಷೇತರರಾಗಿ ಸ್ಪರ್ಧಿಸಿ ಎಂಬ ಒತ್ತಾಯ ಮಾಡಿದ್ದಾರೆ. ಹೀಗಾಗಿ ಸುಮಲತಾ ಮುಂದಿನ ನಡೆಯೇನು ಎಂಬುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಈಗಲೂ ಸುಮಲತಾ ನಾನು ಸ್ಪರ್ಧಿಸಿದರೆ ಮಂಡ್ಯದಿಂದಲೇ. ನನಗೆ ಜೀವನ ಏನಿದ್ದರೂ ಮಂಡ್ಯದಿಂದಲೇ ಎಂದು ಪುನರುಚ್ಚರಿಸಿದ್ದಾರೆ. ಹೀಗಾಗಿ ಇಂದು ಮತ್ತೊಮ್ಮೆ ಮಂಡ್ಯದಲ್ಲಿ ಬೆಂಬಲಿಗರ ಜೊತೆ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

Chinnaswamy stampede: ಬಿ ದಯಾನಂದ್ ಮೆಸೇಜ್ ಮಾಡಿದ್ರು: ಶಾಕಿಂಗ್ ಸತ್ಯ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Arecanut price today: ಅಡಿಕೆ ಬೆಳೆಗಾರರಿಗೆ ಶಾಕ್, ಇಂದಿನ ಬೆಲೆ ಎಷ್ಟಾಗಿದೆ ನೋಡಿ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments