Select Your Language

Notifications

webdunia
webdunia
webdunia
webdunia

ಮಂಡ್ಯದಲ್ಲಿ ಕೈ ತಪ್ಪಿದ ಟಿಕೆಟ್: ಸುಮಲತಾ ಮುನಿಸು

Sumalatha Ambareesh

Krishnaveni K

ಬೆಂಗಳೂರು , ಶನಿವಾರ, 13 ಜನವರಿ 2024 (11:01 IST)
Photo Courtesy: facebook
ಬೆಂಗಳೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಟಿಕೆಟ್ ಗಾಗಿ ಸುಮಲತಾ ಅಂಬರೀಶ್ ಮತ್ತು ಎಚ್.ಡಿ. ಕುಮಾರಸ್ವಾಮಿ ನಡುವೆ ಪೈಪೋಟಿ ಏರ್ಪಟ್ಟಿದೆ.

ರಾಜ್ಯದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ನಿಂದ ಮಂಡ್ಯ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ನಡುವೆ ಜಿದ್ದಾಜಿದ್ದಿನ ಹೋರಾಟ ನಡೆದಿತ್ತು.

ಈ ವೇಳೆ ಸುಮಲತಾ ಬಗ್ಗೆ ಜೆಡಿಎಸ್ ನಾಯಕರು ಆಕ್ಷೇಪಾರ್ಹ ಹೇಳಿಕೆಗಳನ್ನೂ ನೀಡಿದ್ದರು. ಇದೀಗ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ನಾಯಕ ಕುಮಾರಸ್ವಾಮಿ ಮತ್ತೆ ತಮ್ಮ ಮೆಚ್ಚಿನ ಕ್ಷೇತ್ರ ಮಂಡ್ಯದಿಂದ ತಾವೇ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಅತ್ತ ಸುಮಲತಾಗೂ ತಮ್ಮ ಮೆಚ್ಚಿನ ಕ್ಷೇತ್ರ ಮಂಡ್ಯ ಬಿಟ್ಟುಕೊಡುವ ಮನಸ್ಸಿಲ್ಲ.

ಇದೀಗ ಸುಮಲತಾ ಬಿಜೆಪಿ ಸೇರಿದ್ದಾರೆ. ಆದರೆ ಇದುವೇ ಅವರಿಗೆ ಮುಳುವಾಗಿದೆ.  ಮಂಡ್ಯ ಕ್ಷೇತ್ರ ಬಿಟ್ಟುಕೊಡುವುದು ಅವರಿಗೆ ಕೊಂಚವೂ ಇಷ್ಟವಿಲ್ಲ. ಹೀಗಾಗಿ ಸುಮಲತಾ ಅಸಮಾಧಾನಗೊಂಡಿದ್ದು, ಸದ್ಯದಲ್ಲೇ ಬಿಜೆಪಿ ರಾಜ್ಯಾಧ‍್ಯಕ್ಷ ವಿಜಯೇಂದ್ರರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಭ್ರಷ್ಟಾಚಾರದಲ್ಲಿ ‌ನಾವೇ ನಂ.1 ಅಂತ ಜಾಹೀರಾತು ಕೊಡಿ