Webdunia - Bharat's app for daily news and videos

Install App

ಸುಮಲತಾ-ಎಚ್ ಡಿಕೆ ವಾರ್ ಗೆ ರಿಯಲ್ ಕಾರಣವೇನು ಗೊತ್ತಾ?

Webdunia
ಮಂಗಳವಾರ, 6 ಜುಲೈ 2021 (09:20 IST)
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ನಡುವೆ ನಡೆದಿರುವ ಮಾತಿನ ಚಕಮಕಿಗೆ ನಿಜ ಕಾರಣ ಅಕ್ರಮ ಗಣಿಗಾರಿಕೆ ಬಗ್ಗೆ ಸುಮಲತಾ ಮಾತನಾಡಿರುವುದು ಎನ್ನಲಾಗಿದೆ.


ಈ ಮಾತಿನ ಚಕಮಕಿಗೆ ಮೂಲವಾಗಿದ್ದು ಸುಮಲತಾ ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯಿಂದ ಕೆಆರ್ ಎಸ್ ಜಲಾಶಯಕ್ಕೆ ಹಾನಿಯಾಗುತ್ತಿದೆ ಎಂದು ಹೇಳಿಕೆ ನೀಡಿದ್ದು. ಜಲಾಶಯದಲ್ಲಿ ಬಿರುಕಿನ ವಿಚಾರವನ್ನು ಅಧಿಕಾರಿಗಳೊಂದಿಗೆ ತೆರಳಿ ಪರಿಶೀಲಿಸಲು ಸ್ಥಳೀಯ ನಾಯಕರು ಬಿಡುತ್ತಿಲ್ಲ ಎಂದು ಸುಮಲತಾ ಪರೋಕ್ಷವಾಗಿ ಜೆಡಿಎಸ್ ನಾಯಕರನ್ನು ಕುಟುಕಿದ್ದು ಎಚ್ ಡಿಕೆ ಕೆರಳಿಸಿದೆ.

ಇದೇ ಕಾರಣಕ್ಕೆ ಅವರೂ ಸುಮಲತಾ ವಿರುದ್ಧ ತೊಡೆ ತಟ್ಟಿದ್ದಾರೆ. ಇದರ ಜೊತೆಗೆ ಮೈ ಶುಗರ್ ಫ್ಯಾಕ್ಟರಿ ಪುನರಾರಂಭದ ಕುರಿತು ಇತ್ತೀಚೆಗಷ್ಟೇ ಕುಮಾರಸ್ವಾಮಿ ಕಾರ್ಖಾನೆಯ ನೌಕರರು, ಸ್ಥಳೀಯ ನಾಯಕರೊಂದಿಗೆ ಮಾತುಕತೆ ನಡೆಸಿದ್ದರು. ಈ ಸಂದರ್ಭದಲ್ಲಿ ನೌಕರರು, ಸ್ಥಳೀಯ ನಾಯಕರು ಕಾರ್ಖಾನೆಯನ್ನು ಖಾಸಗೀಕರಣಗೊಳಿಸದಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಬೇಕೆಂದು ಕುಮಾರಸ್ವಾಮಿಗೆ ಒತ್ತಾಯ ಹೇರಿದ್ದರು.

ಆದರೆ ಸುಮಲತಾ ಹಿಂದೆ ಖಾಸಗಿಗಾಗದರೂ ಸರಿಯೇ, ಸರ್ಕಾರವಾದರೂ ಸರಿಯೇ ಒಟ್ಟಿನಲ್ಲಿ ಕಾರ್ಖಾನೆ ಪುನರಾರಂಭಗೊಳ್ಳಬೇಕು ಎಂದು ಹೇಳಿಕೆ ನೀಡಿದ್ದೇ ಇಬ್ಬರು ನಾಯಕರ ನಡುವಿನ ಶೀತಲ ಸಮರ ಸ್ಪೋಟಗೊಳ್ಳಲು ಕಾರಣವಾಗಿದೆ. ಆದರೆ ಸುಮಲತಾ ವಿರುದ್ಧ ಕಿಡಿ ಕಾರುವಾಗ ತಪ್ಪಾಗಿ ಮಾತನಾಡಿ ಇಕ್ಕಟ್ಟಿಗೆ ಸಿಲುಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments