ಮಂಡ್ಯದಲ್ಲಿ ಸ್ವಂತ ಮನೆ ಹುಡುಕುತ್ತಿರುವ ಸುಮಲತಾ ಅಂಬರೀಶ್; ಹಾಗಾದ್ರೆ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುವುದು ಫಿಕ್ಸಾ?

Webdunia
ಸೋಮವಾರ, 25 ಫೆಬ್ರವರಿ 2019 (12:02 IST)
ಮಂಡ್ಯ : ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಸ್ವಂತ ಮನೆ ಹುಡುಕುತ್ತಿರುವ ಹಿನ್ನಲೆಯಲ್ಲಿ ಅವರು ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಕಾಂಗ್ರೆಸ್ ಅಥವಾ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತ ಎಂದು ಹೇಳಲಾಗುತ್ತಿದೆ.

ಸುಮಲತಾ ಅಂಬರೀಶ್ ಅವರಿಗೆ ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗದಿದ್ದರೆ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ಅವರು ಮಂಡ್ಯದಲ್ಲಿ ಮನೆ ಹುಡುಕಲು ತಮ್ಮ ಆಪ್ತರಿಗೆ ತಿಳಿಸಿರುವ ವಿಚಾರ ಕೇಳಿದರೆ ಮಂಡ್ಯದಲ್ಲಿ ಸುಮಲತಾ ಅವರು ಕಾಂಗ್ರೆಸ್ ಅಥವಾ ಪಕ್ಷೇತರರಾಗಿ ಸ್ಪರ್ಧೆ ಮಾಡುವುದು ಖಚಿತವಾಗಿದೆ ಎನ್ನಲಾಗಿದೆ.

 

ಹಾಗೇ ಮನೆ ನೋಡಲು ಹೇಳಿದ ಸುಮಲತಾ ಅವರಿಗೆ ಬಾಡಿಗೆ ಮನೆ ಬೇಡ ಸ್ವಂತ ಮನೆ ಕೊಂಡುಕೊಳ್ಳಿ ಎಂದು ಆಪ್ತರು ಸಲಹೆ ನೀಡಿದ್ದಾರೆ. ಬಾಡಿಗೆ ಮನೆ ಮಾಡಿದರೆ ಮಾಜಿ ಸಂಸದೆ ರಮ್ಯಾ ಅವರಂತೆ ನೀವು ಕೂಡ ಚುನಾವಣೆ ಮುಗಿದ ಮೇಲೆ ಹೊರಟು ಹೋಗುತ್ತೀರಿ ಅಂತ ಅಪಪ್ರಚಾರ ಮಾಡುತ್ತಾರೆ. ಹೀಗಾಗಿ ಸ್ವಂತಕ್ಕೆ ಮನೆ ತೆಗೆದುಕೊಳ್ಳಿ. ಚುನಾವಣೆ ಇರಲಿ ಬಿಡಲಿ ಮಂಡ್ಯದಲ್ಲಿ ಇದ್ದು ಜನರ ಕಷ್ಟಕ್ಕೆ ಸ್ಪಂದಿಸಲು ಸ್ವಂತ ಮನೆ ಮಾಡಿ ಎಂದು ಅಂಬರೀಶ್ ಅಭಿಮಾನಿಗಳು ಮತ್ತು ಬೆಂಬಲಿಗರು ಸುಮಲತಾ ಅವರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.


 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

                                                                                                      

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments