Select Your Language

Notifications

webdunia
webdunia
webdunia
webdunia

ಸುಮಲತಾ ಅಂಬರೀಶ್ ಕಣಕ್ಕಿಳಿಸಲು ಮುಂದುವರಿದ ಯತ್ನ

ಸುಮಲತಾ ಅಂಬರೀಶ್ ಕಣಕ್ಕಿಳಿಸಲು ಮುಂದುವರಿದ ಯತ್ನ
ಬೆಂಗಳೂರು , ಗುರುವಾರ, 31 ಜನವರಿ 2019 (20:04 IST)
ಲೋಕಸಭಾ ಕ್ಷೇತ್ರದಲ್ಲಿ ದೋಸ್ತಿಗೆ ಸೆಡ್ಡು ಹೊಡೆಯಲು ಕಾಂಗ್ರೆಸ್ ಪ್ಲಾನ್ ಮಾಡಿದೆ. ಸುಮಲತಾ ಅಂಬರೀಶ್ರನ್ನ ಕಣಕ್ಕಿಳಿಸುವಂತೆ ಜಿಲ್ಲಾ ಮುಖಂಡರು ಇನ್ನಿಲ್ಲದ ಪ್ರಯತ್ನ ಪಡುತ್ತಿದ್ದಾರೆ.

ಹೀಗಾಗಿ ಕಾಂಗ್ರೆಸ್ ಕಾರ್ಯಕರ್ತರು ನಿರಂತರವಾಗಿ ಸುಮಲತಾ ಅಂಬರೀಶ್ ಮೇಲೆ ಒತ್ತಡ ತರುತ್ತಿದ್ದಾರೆ. ನಿತ್ಯ ಬೆಂಗಳೂರಿನಲ್ಲಿರುವ ಅಂಬರೀಶ್ ನಿವಾಸಕ್ಕೆ ಆಗಮಿಸುತ್ತಿರುವ ಕೈ ಕಾರ್ಯಕರ್ತರು ಸುಮಲತಾ ಅವರ ಮನವೊಲಿಕೆಗೆ ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ.

ಬಗ್ಗೆ ಪ್ರತಿಕ್ರಿಯೆ ನೀಡಿರುವ ಸುಮಲತಾ ಅಂಬರೀಶ್, ಅಂಬರೀಶ್ ಕಾಂಗ್ರೆಸ್ ನಿಂದ ಗುರುತಿಸಿಕೊಂಡವರು. ಹಲವು ವರ್ಷ ಕಾಂಗ್ರೆಸ್ನಲ್ಲೇ ಇದ್ದವರು. ಹಾಗಾಗಿ ನಾನೂ ಕೂಡ ಕಾಂಗ್ರೆಸ್ ಪರವಾಗಿ ಇರಬೇಕಾಗುತ್ತದೆ. ಅಲ್ಲದೇ ಬಂಡಾಯ ಅಭ್ಯರ್ಥಿಯಾಗಿ ನಿಲ್ಲುವಷ್ಟೆಲ್ಲ ನಾನು ಬೆಳೆದಿಲ್ಲ. ಅಂಬರೀಶ್ ಅವರ ಮೇಲಿನ ಅಭಿಮಾನದಿಂದ ಸ್ಪರ್ಧಿಸುವಂತೆ ಕೈ ಕಾರ್ಯಕರ್ತರು ಒತ್ತಾಯ ಮಾಡುತ್ತಿದ್ದಾರೆ.

ಮಂಡ್ಯ ಕ್ಷೇತ್ರದ ಪ್ರತಿ ತಾಲ್ಲೂಕು, ಬ್ಲಾಕ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರು ಆಶಿಸುತ್ತಿದ್ದಾರೆ. ಆದರೆ, ರಾಜಕೀಯದಲ್ಲಿ ಮುಂದುವರಿಯಬೇಕೆ..? ಬೇಡವೇ..? ಎಂಬ ಬಗ್ಗೆ ಇನ್ನೂ ನಾನು ಸ್ಪಷ್ಟ ನಿರ್ಧಾರ ಮಾಡಿಲ್ಲ. ಅಲ್ಲದೇ, ಚಿತ್ರರಂಗದಿಂದ ನನ್ನ ಯಾವುದೇ ನಿರ್ಧಾರಕ್ಕೆ ಸಂಪೂರ್ಣ ಬೆಂಬಲ ಸಿಗಲಿದೆ ಅಂತಾ ಅವರು ವಿಶ್ವಾಸ ವ್ಯಕ್ತಪಡಿಸಿದರು.



Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದಗಂಗಾ ಶ್ರೀ ಹೆಸರಲ್ಲಿ ಯೋಜನೆ ಘೋಷಣೆ ಮಾಡಿದ ಸಿಎಂ!