Select Your Language

Notifications

webdunia
webdunia
webdunia
webdunia

ಸಚಿವ ಡಿಸಿ ತಮ್ಮಣ್ಣ ವಿರುದ್ಧ ಸಂಸದೆ ಸುಮಲತಾ ಗರಂ

ಸಚಿವ ಡಿಸಿ ತಮ್ಮಣ್ಣ ವಿರುದ್ಧ ಸಂಸದೆ ಸುಮಲತಾ ಗರಂ
ಬೆಂಗಳೂರು , ಶನಿವಾರ, 8 ಜೂನ್ 2019 (16:14 IST)
ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಇಂದು ಬಿಜೆಪಿ ಕಾರ್ಯಾಲಯ, ಜಗನ್ನಾಥ ಭವನಕ್ಕೆ ಭೇಟಿ ನೀಡಿದರು.

ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಶೆಟ್ಟಿ, ಬೆಂಗಳೂರು ನಗರ ಅಧ್ಯಕ್ಷ ಪಿ.ಎನ್.ಸದಾಶಿವ  ಸ್ವಾಗತಿಸಿದರು. ಮೊದಲು ಭಾರತಾಂಬೆ ಭಾವಚಿತ್ರಕ್ಕೆ ಪುಷ್ಪ ಅರ್ಚನೆ ಮಾಡಿ, ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಯುವ ಮೋರ್ಚಾ  ಮುಖಂಡ ಬಿ.ವೈ.ವಿಜಯೇಂದ್ರ, ತಮ್ಮೇಶ ಗೌಡ ಉಪಸ್ಥಿತರಿದ್ದರು.

ಸುಮಲತಾ ಮಾತನಾಡಿ, ನಾನು ಇದೇ ಮೊದಲ ಬಾರಿಗೆ ದ್ವೇಷದ ರಾಜಕಾರಣವನ್ನು ನೋಡುತ್ತಿದ್ದೇನೆ.

ನನ್ನನ್ನು  ಬೆಂಬಲಿಸಿದ ಕಾರಣಕ್ಕೆ ಕ್ಷೇತ್ರದ ಜನರ ಕೆಲಸ ಕಾರ್ಯ ಮಾಡಿಕೊಡಲ್ಲ ಎಂದು ಸಚಿವರು, ಶಾಸಕರು ಹೇಳುತ್ತಾರೆ ಎಂದ್ರೆ, ಅದು ಅವರನ್ನು ಆಯ್ಕೆ ಮಾಡಿದ ಮತದಾರರಿಗೆ ಮಾಡಿದ ದ್ರೋಹ ಎಂದರು. ಅವರನ್ನು ರಾಜೀನಾಮೆ ಕೊಟ್ಟು ಹೋಗಿ ಎಂದು ಕ್ಷೇತ್ರದ ಮತದಾರರೇ ಅವರನ್ನು ಕೇಳುತ್ತಾರೆ. ದ್ವೇಷದ ರಾಜಕಾರಣವನ್ನು ಜನ ಎಂದಿಗೂ ಒಪ್ಪೋದಿಲ್ಲ. ಹೀಗಂತ ಸಚಿವ ಡಿ.ಸಿ.ತಮ್ಮಣ್ಣ ವಿರುದ್ಧ ಸುಮಲತಾ ಗರಂ ಆಗಿ ಹೇಳಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಸುಗಮ ಕಲಾಪ ನಡೆಸಲು ಮೋದಿ ಸಂಪುಟದ ಸಚಿವ ಮಾಡಿದ್ದೇನು?