Webdunia - Bharat's app for daily news and videos

Install App

ರಾಜಕೀಯ ನಾಯಕರಿಗೆ ಮಂಡ್ಯದ ಜನ, ಮಣ್ಣಿನ ಗುಣದ ಬಗ್ಗೆ ತಿಳಿಸಿದ ಸುಮಲತಾ

Webdunia
ಶುಕ್ರವಾರ, 15 ಮಾರ್ಚ್ 2019 (10:58 IST)
ಮಂಡ್ಯ : ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸುವ ರಾಜಕೀಯ ನಾಯಕರಿಗೆ ನಟಿ ಸುಮಲತಾ ಅಂಬರೀಶ್ ಅವರು ಮಂಡ್ಯ ಜನರ, ಹಾಗೂ ಮಣ್ಣಿನ ಗುಣದ ಬಗ್ಗೆ ತಿಳಿಸುವುದರ ಮೂಲಕ  ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.


ಸುಮಲತಾ ಅಂಬರೀಶ್ ಅವರು ತಮ್ಮ ಫೇಸ್‍ ಬುಕ್ ಪೇಜ್‍ನಲ್ಲಿ, “ಅಂಬರೀಶ್‍ರನ್ನು ಪ್ರಾಣಕ್ಕಿಂತ ಹೆಚ್ಚು ಪ್ರೀತಿಸುವ ಮಂಡ್ಯದ ಪ್ರತಿಯೊಬ್ಬರು ಅಂಬರೀಶ್ ಬಂಧುಗಳು. ಏಕೆಂದರೆ ಅಂಬರೀಶ್‍ರಲ್ಲಿ ಇರುವ ಗುಣವೇ ಮಂಡ್ಯದ ಜನರಲ್ಲಿ ಇದೆ. ಮಂಡ್ಯದ ಮಣ್ಣಿನ ಗುಣದಲ್ಲಿ ಕಪಟವೇ ಇಲ್ಲ. ಸುಳ್ಳುಗಳಿಲ್ಲ. ಸಮಯಕ್ಕೆ ತಕ್ಕ ಹಾಗೆ ಮಾತನಾಡುವ ಜಾಯಮಾನ ಮಂಡ್ಯದ ಮಣ್ಣಿನಲ್ಲಿ ಇಲ್ಲ.


ಮಂಡ್ಯದ ಮಣ್ಣು ಬರಿ ಮುಗ್ಧತೆಯಿಂದ ಕೂಡಿಲ್ಲ. ಅದು ಪ್ರಾಮಾಣಿಕತೆಯಿಂದಲೂ ಕೂಡಿದೆ. ಆ ಪ್ರಾಮಾಣಿಕತೆಗೆ ಮೋಸವೆಸಗುವ ರಾಜಕೀಯ ನನಗೆ ಬೇಕಾಗಿಲ್ಲ. ನನ್ನದು ಪ್ರಾಮಾಣಿಕವಾದ, ಅಂಬರೀಶ್ ಪಾಲಿಸುತ್ತಿದ್ದ ರಾಜಕೀಯ ಮಂಡ್ಯದ ಜನರ ರಾಜಕೀಯ” ಎಂದು ಪೋಸ್ಟ್ ಹಾಕಿದ್ದಾರೆ.


ಹಾಗೇ ಮತ್ತೊಂದು ಪೋಸ್ಟ್ ಮಾಡಿನಲ್ಲಿ ಅವರು, “ಅಂಬರೀಶ್ ರಾಜಕೀಯ ನಾಟಕವಿಲ್ಲದ, ಸುಳ್ಳು ಭರವಸೆಗಳಿಲ್ಲದ, ಒಳಗೊಂದು ಹೊರಗೊಂದು ಮಾತುಗಳಿಲ್ಲದ, ಜನರಿಂದ ಕೆಲಸವಾಗಬೇಕು ಎಂದಾಗ ಜನರೆದುರು ಕಪಟ ನಾಟಕವಾಡಿ ಮೋಸಗೊಳಿಸದ, ನೇರಾನೇರ ಇದ್ದದ್ದು ಇದ್ದ ಹಾಗೆ ಹೇಳುವ ದಿಟ್ಟ ನಡೆಯ ರಾಜಕೀಯ ಅಂಬರೀಶ್ ರಾಜಕೀಯ. ಆ ರಾಜಕೀಯವೇ ಅತ್ಯುತ್ತಮ. ಅಂಬರೀಶ್ ರಾಜಕೀಯವೇ ನಮ್ಮದಾಗಲಿ” ಎಂದು ಸುಮಲತಾ ಜೆಡಿಎಸ್ ವರಿಷ್ಠರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments