ಕಾಂಗ್ರೆಸ್ ಬೆಂಬಲಿಸಿ ಸೇಡು ತೀರಿಸಿಕೊಳ್ಳುತ್ತಾರಾ ಸುಮಲತಾ

Krishnaveni K
ಮಂಗಳವಾರ, 26 ಮಾರ್ಚ್ 2024 (14:56 IST)
Photo Courtesy: facebook
ಬೆಂಗಳೂರು: ಈ ಬಾರಿ ಮಂಡ್ಯ ಕ್ಷೇತ್ರದಿಂದ ಟಿಕೆಟ್ ಕೈ ತಪ್ಪಲು ಕಾರಣವಾದ ಬಿಜೆಪಿ-ಜೆಡಿಎಸ್ ನಾಯಕರ ಮೇಲೆ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅಸಮಾಧಾನಗೊಂಡಿದ್ದಾರೆ. ಹೀಗಾಗಿ ಈ ಬಾರಿ ಮಂಡ್ಯದಲ್ಲಿ ಕಾಂಗ್ರೆಸ್ ಬೆಂಬಲಿಸುವ ಮೂಲಕ ಸೇಡು ತೀರಿಸಿಕೊಳ್ಳುವ ಸಾಧ‍್ಯತೆಯಿದೆ ಎನ್ನಲಾಗಿದೆ.

ಬಹುಶಃ ಸುಮಲತಾ ಪಕ್ಷೇತರರಾಗಿಯೇ ಇದ್ದಿದ್ದರೆ ಅವರಿಗೆ ಈ ಟಿಕೆಟ್ ಬಿಕ್ಕಟ್ಟು ಕಾಡುತ್ತಿರಲಿಲ್ಲ. ಆದರೆ ಬಿಜೆಪಿ ಸೇರಿಕೊಂಡು, ಅತ್ತ ಬಿಜೆಪಿ, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವುದರಿಂದ ಸುಮಲತಾಗೆ ಟಿಕೆಟ್ ಕೈ ತಪ್ಪಿ ಹೋಗಿದೆ. ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ನಾಯಕರು ಸುಮಲತಾ ಬಗ್ಗೆ ಇನ್ನಿಲ್ಲದಂತೆ ನಾಲಿಗೆ ಹರಿಬಿಟ್ಟಿದ್ದರು.

ಇದೀಗ ಅದೇ ಜೆಡಿಎಸ್ ಗೆ ಮಂಡ್ಯ ಟಿಕೆಟ್ ಬಿಟ್ಟುಕೊಟ್ಟಿರುವುದು ಸುಮಲತಾ ಆಕ್ರೋಶಕ್ಕೆ ಕಾರಣವಾಗಿದೆ. ದೆಹಲಿ ಮಟ್ಟದಲ್ಲಿ ಹೋಗಿ ಲಾಬಿ ಮಾಡಿದರೂ ಟಿಕೆಟ್ ಸಿಕ್ಕಿಲ್ಲ. ಹೀಗಾಗಿ ಈ ಬಾರಿ ಮಂಡ್ಯದಲ್ಲಿ ಕಾಂಗ್ರೆಸ್ ಗೆ ಪರೋಕ್ಷವಾಗಿ ಬೆಂಬಲ ಕೊಡುವುದರ ಮೂಲಕ ದಳಪತಿಗಳ ವಿರುದ್ಧ ಸೇಡು ತೀರಿಸಿಕೊಳ್ಳಬಹುದು ಎನ್ನಲಾಗಿದೆ.

ಕಳೆದ ಬಾರಿ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲಿಸಲು ಬಿಜೆಪಿ ಸಹಕಾರ ನೀಡಿತ್ತು. ಕಾಂಗ್ರೆಸ್ ಕೂಡಾ ಪ್ರಬಲ ಅಭ್ಯರ್ಥಿಯನ್ನು ಹಾಕದೇ ಸುಮಲತಾಗೆ ಪರೋಕ್ಷ ಬೆಂಬಲ ಕೊಟ್ಟಿತ್ತು ಎಂಬ ಮಾತುಗಳಿವೆ. ಇಂದು ಅದೇ ರೀತಿ ಸುಮಲತಾ ಜೆಡಿಎಸ್ ಅಭ್ಯರ್ಥಿಯನ್ನು ಸೋಲಿಸಲು ಪರೋಕ್ಷವಾಗಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಕೊಡುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

50 ಕುಟುಂಬಗಳು ವಾಸವಿದ್ದ ಅಪಾರ್ಟ್‌ಮೆಂಟ್‌ಗೆ ತಗುಲಿದ ಬೆಂಕಿ, ಇಬ್ಬರು ಸಾವು, ರಕ್ಷಣಾ ಕಾರ್ಯಚರಣೆಯ ವಿಡಿಯೋ

ದೇಶದ ಈ ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಕೆಲ ದಿನಗಳವರೆಗೆ ವಿಸ್ತರಣೆ, ಕರ್ನಾಟಕವೂ ಸೇರಿದೆಯಾ ಇಲ್ಲಿದೆ ಮಾಹಿತಿ

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮುಂದಿನ 48ಗಂಟೆಗಳಲ್ಲಿ ಅಂತಿಮ ವರದಿ

ಮಾನ್ಸೂನ್‌ ವೈಪರೀತ್ಯ: 112 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಇತಿಹಾಸ ಬರೆದ ಹವಾಮಾನ

ಸಚಿವ ಸಂಪುಟ ವಿಸ್ತರಣೆ ನಡುವೆ ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್, ಭಾರೀ ಕುತೂಹಲ

ಮುಂದಿನ ಸುದ್ದಿ
Show comments