Webdunia - Bharat's app for daily news and videos

Install App

ಸಂಸದೆ ಸುಮಲತಾ ಇಲ್ಲಿಗೆ ಬರಲೇಬೇಕಂತೆ: ಕಾರಣ?

Webdunia
ಶನಿವಾರ, 27 ಜುಲೈ 2019 (19:28 IST)
ಸಂಸದೆ ಸುಮಲತಾ ಅಂಬರೀಶ್ ಕೆ.ಆರ್.ಪೇಟೆಗೆ ಬರಬೇಕು. ಹೀಗಂತ ರೈತ ಮುಖಂಡರು ಆಗ್ರಹ ಮಾಡಿದ್ದಾರೆ.

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಕೆ.ಆರ್.ಪೇಟೆಗೆ ಆಗಮಿಸಬೇಕು. ಇಲ್ಲಿ ನಡೆಯುತ್ತಿರೋ ರೈತರ ಹೋರಾಟಕ್ಕೆ ಧ್ವನಿಯಾಗಿ ಹೇಮಾವತಿ ನದಿ ಕಾಲುವೆಗಳಿಗೆ ನೀರನ್ನು ಹರಿಸಲು ಸಹಾಯ ಮಾಡಬೇಕು. ಹೀಗಂತ ರೈತ ಮುಖಂಡ ಲಕ್ಷ್ಮೀಪುರ ಜಗದೀಶ್ ಹೇಳಿದ್ದಾರೆ.

ಮಂಡ್ಯ ಜಿಲ್ಲೆ ಗೊರೂರು ಜಲಾಶಯದಿಂದ ಹೇಮಾವತಿ ನದಿಗೆ ನೀರನ್ನು ಹರಿಸಿ ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ 30 ಸಾವಿರ ಎಕರೆ ಭೂ ಪ್ರದೇಶದಲ್ಲಿ ಒಣಗುತ್ತಿರುವ ಬೆಳೆಗಳನ್ನು ಉಳಿಸಬೇಕು. ಕೆರೆ-ಕಟ್ಟೆಗಳಿಗೆ ನೀರು ಹರಿಸಿ ಪಶುಪಕ್ಷಿಗಳು ಹಾಗೂ ಜನಸಾಮಾನ್ಯರಿಗೆ ಕುಡಿಯುವ ನೀರನ್ನು ಒದಗಿಸಿ ಅನುಕೂಲ ಮಾಡಿಕೊಡಬೇಕು. ಹೀಗಂತ ಆಗ್ರಹಿಸಿ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಮರುವನಹಳ್ಳಿ ಶಂಕರ್ ನೇತೃತ್ವದಲ್ಲಿ ನೂರಾರು 

ರೈತಮುಖಂಡರು ಹೇಮಾವತಿ ಜಲಾಶಯ ಯೋಜನೆಯ ಕಾರ್ಯಪಾಲಕ ಅಭಿಯಂತರರ ಕಛೇರಿಗೆ ಮುತ್ತಿಗೆ ಹಾಕಿ ಕಾರ್ಯಪಾಲಕ ಅಭಿಯಂತರ ಬಾಲಕೃಷ್ಣ ಮತ್ತು ಸಹಾಯಕ ಕಾರ್ಯಪಾಲಕ ಅಭಿಯಂತರ ನಿಂಗಪ್ಪ ಅವರಿಗೆ ದಿಗ್ಭಂದನ ವಿಧಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರ್ಯಪಾಲಕ ಎಂಜಿನಿಯರ್ ಬಾಲಕೃಷ್ಣ ಅವರನ್ನು ತರಾಟೆಗೆ ತೆಗೆದುಕೊಂಡ ರೈತರು, ಕೆ.ಆರ್.ಎಸ್ ಜಲಾಶಯದಿಂದ ನೀರನ್ನು ಹರಿಸಿರುವ ಅಧಿಕಾರಿಗಳು ಹೇಮಾವತಿ ನದಿ ಅಣೆಕಟ್ಟೆಯಾದ ಗೊರೂರು ಜಲಾಶಯದಿಂದ ಏಕೆ ನೀರನ್ನು ಹರಿಸಲಿಲ್ಲ? ರೈತರಲ್ಲಿಯೇ ತಾರತಮ್ಯ ಮಾಡುತ್ತಿದ್ದೀರಾ? ಕೆ.ಆರ್.ಪೇಟೆ ತಾಲ್ಲೂಕಿನ ರೈತರನ್ನು ಮಲತಾಯಿ ಮಕ್ಕಳಂತೆ ಕಾಣುತ್ತಿದ್ದೀರಾ? ನಾಳೆ ಸಂಜೆಯೊಳಗೆ ನೀರು ಹರಿಸಬೇಕು ಎಂದರು.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

ಮುಂದಿನ ಸುದ್ದಿ
Show comments