Webdunia - Bharat's app for daily news and videos

Install App

ಏಪ್ರಿಲ್ 3 ರಂದು ಮಂಡ್ಯದಲ್ಲಿಯೇ ಸುಮಲತಾ ಮಹತ್ವದ ಘೋಷಣೆ

Krishnaveni K
ಶನಿವಾರ, 30 ಮಾರ್ಚ್ 2024 (16:51 IST)
ಬೆಂಗಳೂರು: ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನಲೆಯಲ್ಲಿ ತಮ್ಮ ಮುಂದಿನ ನಡೆಯೇನು ಎಂಬ ಕುರಿತು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಏಪ್ರಿಲ್ 3 ರಂದು ಘೋಷಣೆ ಮಾಡುವುದಾಗಿ ಹೇಳಿದ್ದಾರೆ.

ಇಂದು ತಮ್ಮ ಬೆಂಬಲಿಗರ ಜೊತೆ ಸುಮಲತಾ ಸಭೆ ನಡೆಸಿದ್ದಾರೆ. ಅದಾದ ಬಳಿಕ ತಮ್ಮ ಮುಂದಿನ ನಡೆಯೇನು ಎಂಬುದನ್ನು ಘೋಷಿಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಮಂಡ್ಯದಿಂದ ಪಕ್ಷೇತರರಾಗಿ ಸ್ಪರ್ಧಿಸುತ್ತಾರಾ ಅಥವಾ ಜೆಡಿಎಸ್ ಅಭ್ಯರ್ಥಿಯನ್ನು ಬೆಂಬಲಿಸುತ್ತಾರಾ ಎನ್ನುವ ಬಗ್ಗೆ ಅನುಮಾನಗಳಿತ್ತು.

ತಾನು ಸ್ಪರ್ಧಿಸಿದರೆ ಮಂಡ್ಯದಿಂದಲೇ ಎಂದು ಪಟ್ಟು ಹಿಡಿದು ಕೂತಿರುವ ಸುಮಲತಾ ಪಕ್ಷೇತರರಾಗಿ ಸ್ಪರ್ಧಿಸಲು ಒಂದು ವರ್ಗದ ಬೆಂಬಲಿಗರಿಂದ ಒತ್ತಡವಿದೆ. ಒಂದು ವೇಳೆ ಪಕ್ಷೇತರರಾಗಿ ನಿಂತರೂ ಅವರ ಹಾದಿ ಅಷ್ಟು ಸುಗಮವಾಗಿಲ್ಲ. ಹೀಗಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿದ್ದರೂ ಎಚ್ಚರಿಕೆಯಿಂದ ಹೆಜ್ಜೆಯಿಡಬೇಕಾಗುತ್ತದೆ.

ಆದರೆ ಇಂದಿನ ಸಭೆಯಲ್ಲಿ ಯಾವುದೇ ತೀರ್ಮಾನಕ್ಕೆ ಬರಲಾಗಿಲ್ಲ. ಅದರ ಬದಲು ಏಪ್ರಿಲ್ 3 ರಂದು ಸುಮಲತಾ ಮಂಡ್ಯದಲ್ಲಿ ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸಲಿದ್ದು, ಅಲ್ಲಿಯೇ ತಮ್ಮ ಭವಿಷ್ಯದ ನಿರ್ಧಾರವೇನು ಎಂಬುದನ್ನು ಘೋಷಣೆ ಮಾಡಲಿದ್ದಾರೆ. ನಿಮ್ಮನ್ನು ನೋಯಿಸುವ ನಿರ್ಧಾರ ಮಾಡಲ್ಲ. ಮಂಡ್ಯದ ಋಣ ಬಿಡಲು ಸಾಧ‍್ಯವಿಲ್ಲ. ಅಲ್ಲಿನ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

RCB Victory Parade: ಕಾಲ್ತುಳಿತದಲ್ಲಿ ಮೂವರು ಫ್ಯಾನ್ಸ್ ಸಾವು, ಹಲವು ಮಂದಿಗೆ ಗಾಯ

ಮುಂದಿನ ಸುದ್ದಿ
Show comments