Webdunia - Bharat's app for daily news and videos

Install App

ಮಂಡ್ಯದಲ್ಲಿ ಇಂದು ಸುಮಲತಾ ಮಹತ್ವದ ಮೀಟಿಂಗ್

Krishnaveni K
ಬುಧವಾರ, 3 ಏಪ್ರಿಲ್ 2024 (08:57 IST)
ಮಂಡ್ಯ: ಮಂಡ್ಯ ಲೋಕಸಭೆ ಕ್ಷೇತ್ರ ರಂಗೇರುತ್ತಿದ್ದು, ಇಂದು ಬಿಜೆಪಿಯಿಂದ ಟಿಕೆಟ್ ವಂಚಿತರಾಗಿರುವ ಸುಮಲತಾ ತಮ್ಮ ಬೆಂಬಲಿಗರ ಜೊತೆ ಸಭೆ ನಡೆಸಲಿದ್ದಾರೆ.

ಇಂದು ಮಂಡ್ಯದಲ್ಲಿ ತಮ್ಮ ಬೆಂಬಲಿಗರು, ಸ್ಥಳೀಯ ನಾಯಕರೊಂದಿಗೆ ಸುಮಲತಾ ಸಭೆ ನಡೆಸಲಿದ್ದಾರೆ. ಅದಾದ ಬಳಿಕ ತಮ್ಮ ಮುಂದಿನ ನಡೆಯೇನು ಎಂದು ಎಲ್ಲರ ಅಭಿಪ್ರಾಯ ಪಡೆದು ಮುಂದುವರಿಯಲಿದ್ದಾರೆ. ಜೆಡಿಎಸ್ ಅಭ್ಯರ್ಥಿ ಕುಮಾರಸ್ವಾಮಿಗೆ ಬೆಂಬಲ ನೀಡುತ್ತಾರೋ, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರೋ ಎಂದು ಇಂದು ಗೊತ್ತಾಗಲಿದೆ.

ಮೊನ್ನೆಯಷ್ಟೇ ಸುಮಲತಾ ಮನೆಗೆ ಭೇಟಿ ನೀಡಿದ್ದ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದ್ದರು. ಇದಕ್ಕೆ ಸುಮಲತಾ ಬೆಂಬಲಿಗರ ಜೊತೆ ಚರ್ಚಿಸಿ ತೀರ್ಮಾನ ಹೇಳುವುದಾಗಿ ತಿಳಿಸಿದ್ದರು. ಅದರಂತೆ ಇಂದು ಘೋಷಣೆ ಮಾಡಲಿದ್ದಾರೆ.

ಇಂದು ನಡೆಯುವ ಸಭೆಯಲ್ಲಿ ಸುಮಲತಾ ಜೊತೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್, ಪುತ್ರ ಅಭಿಷೇಕ್ ಅಂಬರೀಶ್, ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಆಪ್ತರೂ ಸಾಥ್ ನೀಡಲಿದ್ದಾರೆ. ಸುಮಲತಾ ಸ್ಪರ್ಧೆಗೆ ಅವರ ಬೆಂಬಲಿಗರಿಂದ ಒತ್ತಾಯವಿದೆ. ಆದರೆ ಅಂತಿಮ ನಿರ್ಧಾರ ಇಂದು ಹೊರಬೀಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments